ADVERTISEMENT

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸದಿರಲು ಡಿಸಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 16:10 IST
Last Updated 10 ಡಿಸೆಂಬರ್ 2019, 16:10 IST
ಎಚ್‌.ಬಿ. ಮಂಜಪ್ಪ
ಎಚ್‌.ಬಿ. ಮಂಜಪ್ಪ   

ದಾವಣಗೆರೆ: ಉಪಚುನಾವಣೆಯನ್ನು ಬಿಜೆಪಿ ಹಣಬಲ ಮತ್ತು ಅಧಿಕಾರದ ದುರುಪಯೋಗದಿಂದ ಗೆದ್ದಿದೆ. ಈ ಫಲಿತಾಂಶದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರು ಮತ್ತು ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಮನವಿ ಮಾಡಿದೆ.

ಪ್ರಜಾಪ್ರಭುತ್ವ ವಿರೋಧಿ ನೀತಿಯಿಂದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಹಣ ಮತ್ತು ಅಧಿಕಾರದ ಆಸೆ ತೋರಿಸಿ ಬಿಜೆಪಿ ಖರೀದಿಸಿತ್ತು. ಅವರನ್ನು ಗೆಲ್ಲಿಸಲು ಹಣಬಲ ಮತ್ತು ಅಧಿಕಾರದ ದುರುಪಯೋಗ ಪಡಿಸಿಕೊಂಡಿದೆ. ಇಂತಹ ಪ್ರಜಾಪ್ರಭುತ್ವ ವಿರೋಧಿಯ ಸರ್ಕಾರವನ್ನು ತೊಲಗಿಸಲು ಪಣತೊಟ್ಟು ಪ್ರಚಾರ ನಡೆಸಲಾಯಿತು.ಆದರೂ ಪಕ್ಷ ಸೋಲನ್ನಭವಿಸಿತು. ಇದಕ್ಕೆ ಯಾರನ್ನೂ ಹೊಣೆ ಮಾಡುವುದು ಬೇಡ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಮತ್ತು ಎಐಸಿಸಿಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಈ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕಾಂಗ್ರೆಸ್‌ ಮುಖಂಡರಾದ ಅಯೂಬ್ ಪೈಲ್ವಾನ್, ಎ. ನಾಗರಾಜ್, ಚಮನ್ ಸಾಬ್, ಸೈಯದ್ ಚಾರ್ಲಿ, ಜಾಕಿರ್ ಅಲಿ, ಶಫೀಕ್‌ ಪಂಡಿತ್, ದಾದಾಪೀರ್, ಕೆ.ಜಿ. ಶಿವಕುಮಾರ್, ಮುಜಾಹಿದ್, ಕೆ.ಎಲ್. ಹರೀಶ್, ಡೋಲಿ ಚಂದ್ರು ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.