ADVERTISEMENT

ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ: ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 7:45 IST
Last Updated 18 ಏಪ್ರಿಲ್ 2024, 7:45 IST
<div class="paragraphs"><p>ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆಗೂ ಮುನ್ನ ಮೆರವಣಿಗೆ ನಡೆಯಿತು</p></div>

ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆಗೂ ಮುನ್ನ ಮೆರವಣಿಗೆ ನಡೆಯಿತು

   

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರಿಂದ ಬೃಹತ್ ಮೆರವಣಿಗೆ ನಡೆಯಿತು.

ಶಾಮನೂರು ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಿಟುವಳ್ಳಿ ಬಡಾವಣೆಯ ಗ್ರಾಮದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಪತಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜೊತೆಗೂಡಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ADVERTISEMENT

ದಾರಿಯುದ್ದಕ್ಕೂ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಪರ ಕಾರ್ಯಕರ್ತರು ಜೈಕಾರ ಕೂಗಿದರು. ಜೈ ಜೈ ಮಲ್ಲಣ್ಣ ಹಾಡು ಗುನುಗುತ್ತಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಪ್ರಭಾ ಮಲ್ಲಿಕಾರ್ಜುನ್, ಹಸ್ತದ ಭಾವಚಿತ್ರಗಳು ಮೆರವಣಿಗೆಯಲ್ಲಿ ರಾರಾಜಿಸಿದವು.

ನಿಟುವ‌ಳ್ಳಿ ದುರ್ಗಾಂಬಿಕಾ ದೇವಸ್ಥಾನದ ಮೂಲಕ ಆರಂಭವಾದ ಮೆರವಣಿಗೆ ಎಚ್.ಕೆ.ಆರ್. ಸರ್ಕಲ್, ಡಾಂಗೇಪಾರ್ಕ್, ಶಿವಪ್ಪಯ್ಯ ಸರ್ಕಲ್, ತ್ರಿಶೂಲ್ ಟಾಕೀಸ್ ಮೂಲಕ ಪಿ.ಬಿ.ರಸ್ತೆಗೆ ಬಂದು ಸೇರಿತು.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.