ದಾವಣಗೆರೆ: ಜಗಳೂರು ಸಮೀಪದ ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಕ್ಕೆ ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಕಾರಣ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಯುವಕರು ಸಂಕ್ರಾಂತಿ ಹಬ್ಬ ಹಾಗೂ ವಾರಾಂತ್ಯ ಕರ್ಫ್ಯೂ ಇದ್ದುದರಿಂದ ಹಂಪಿ ನೋಡಲು ಹೊರಡುತ್ತಿದ್ದರು. ನಿದ್ರೆಯ ಮಂಪರಿನಲ್ಲಿದ್ದ ಚಾಲಕ ರಸ್ತೆಯ ಪಕ್ಕದಲ್ಲಿದ್ದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಜಗಳೂರಿನಲ್ಲಿ ಕಾರು ಅಪಘಾತ: 7 ಮಂದಿ ಸಾವು
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕರಡಕಲ್ ಗ್ರಾಮದ ಮಲ್ಲನಗೌಡ (22), ಸಂಜೀವ್ (20), ಸಂತೋಷ್ (21). ಜೈಭೀಮ್ (18), ವಿಜಯಪುರ ಜಿಲ್ಲೆಯ ತಾಳಿಕೋಟೆಯ ರಘು (23), ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸಿದ್ದೇಶ್ (20), ವೇದಮೂರ್ತಿ ಹಾಗೂ ಈಚಲಬೊಮ್ಮನಹಳ್ಳಿಯ ಆನಂದ್ (18) ಮೃತರು.
ಜಗಳೂರಿನ ತಾಲ್ಲೂಕು ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.