ADVERTISEMENT

‘ಭಾರತೀಯ ಸಂಸ್ಕೃತಿಯಲ್ಲಿ ನಿಜವಾದ ಖುಷಿ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 14:02 IST
Last Updated 8 ಜೂನ್ 2023, 14:02 IST
ದಾವಣಗೆರೆಯ ಎಸ್.ಎಸ್.ಬಡಾವಣೆಯಲ್ಲಿರುವ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ಎಥ್ನಿಕ್ ಡೇ ಕಾರ್ಯಕ್ರಮ ನಡೆಯಿತು
ದಾವಣಗೆರೆಯ ಎಸ್.ಎಸ್.ಬಡಾವಣೆಯಲ್ಲಿರುವ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ಎಥ್ನಿಕ್ ಡೇ ಕಾರ್ಯಕ್ರಮ ನಡೆಯಿತು   

ದಾವಣಗೆರೆ: ‘ಪಾಶ್ಚಿಮಾತ್ಯ ಸಂಸ್ಕೃತಿಯೇ ಖುಷಿ ಎಂದುಕೊಂಡಿದ್ದೇವೆ. ಆದರೆ, ನಿಜವಾದ ಖುಷಿ ನಮ್ಮ ಭಾರತೀಯ ಸಂಸ್ಕೃತಿಯಲ್ಲಿದೆ’ ಎಂದು ಬಿ.ಎಸ್.ಚನ್ನಬಸಪ್ಪ ಕಾಲೇಜಿನ ಅಧ್ಯಕ್ಷ ಬಿ.ಸಿ.ಶಿವಕುಮಾರ್ ಅಭಿಪ್ರಾಯಪಟ್ಟರು.

ನಗರದ ಎಸ್.ಎಸ್.ಬಡಾವಣೆಯಲ್ಲಿರುವ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ನಡೆದ ‘ನಮ್ಮ ಪರಂಪರೆ-2023’ ಎಥ್ನಿಕ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಂಶುಪಾಲ ಗುರು ಎಂ.ಸಿ ಮಾತನಾಡಿ, ‘ಭಾರತೀಯ ಸಂಸ್ಕೃತಿಯಲ್ಲಿ ವೈವಿಧ್ಯತೆ ಇದೆ. ಇದರಲ್ಲಿ ನಾವು ಯಶಸ್ಸು ಸಾಧಿಸಬಹುದು. ಇಂತಹ ಸಂಸ್ಕೃತಿಯನ್ನು ನಾವು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು’ ಎಂದರು.

ADVERTISEMENT

ರಂಗು ರಂಗಿನ ಉಡುಗೆಗಳನ್ನು ತೊಟ್ಟು ಬಂದಿದ್ದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಬಿಸಿಲನ್ನು ಲೆಕ್ಕಿಸದೆ ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.