ADVERTISEMENT

‘ಸೈಕಲ್‌ನಲ್ಲಿ ವ್ಯಾಯಾಮ ಚೆನ್ನಾಗಿ ಆಗುತ್ತೇ’

ಸಂಸದ ಜಿ.ಎಂ. ಸಿದ್ದೇಶ್ವರ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 5:21 IST
Last Updated 11 ಜುಲೈ 2021, 5:21 IST
ಜಿ.ಎಂ. ಸಿದ್ದೇಶ್ವರ
ಜಿ.ಎಂ. ಸಿದ್ದೇಶ್ವರ   

ದಾವಣಗೆರೆ: ‘ಜನರು ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತದೆ. ರೋಗ ಬರುವುದಿಲ್ಲ..’

ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿರುವುದಕ್ಕೆ ಕಾಂಗ್ರೆಸ್‌ನವರ ಆರೋಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಮೇಲಿನಂತೆ ಉತ್ತರಿಸಿದರು.

‘ಹೊರ ದೇಶಗಳಲ್ಲೂ ಕಚ್ಚಾ ತೈಲದ ಬ್ಯಾರೆಲ್ ಹೆಚ್ಚಾಗಿದೆ. ಅಲ್ಲಿ ಕಡಿಮೆಯಾದರೆ ಇಲ್ಲೂ ಕಡಿಮೆಯಾಗುತ್ತದೆ. ಕೋವಿಡ್ ಇರುವುದರಿಂದ ಬೆಲೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಕಡಿಮೆಯಾಗುತ್ತದೆ. ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಕ್ರಮ ಕೈಗೊಳ್ಳುತ್ತಾರೆ’ ಎಂದು ಸಮರ್ಥಿಸಿಕೊಂಡರು.

ADVERTISEMENT

ಜಿಎಸ್‌ಟಿ ಪಾಲು ರಾಜ್ಯಕ್ಕೆ ಸೂಕ್ತವಾಗಿ ಸಿಗುತ್ತಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ, ‘ಈ ಬಗ್ಗೆ ನನಗೇನು ಗೊತ್ತಿಲ್ಲ, ಹಣಕಾಸು ಸಚಿವರನ್ನು ಕೇಳಿ ಎಂದು ಉತ್ತರಿಸಿದ ಸಿದ್ದೇಶ್ವರ ‘ರಾಜ್ಯದಲ್ಲಿ ನಾಲ್ವರು ಸಚಿವರು ಇದ್ದು, ಅವರು ಕೇಳುತ್ತಾರೆ’ ಎಂದರು.

ಕಾಂಗ್ರೆಸ್‌ನಿಂದ ಈ ಹಿಂದೆ ಇದ್ದ 28 ಜನ ಸಂಸದರು ರಾಜ್ಯಕ್ಕೆ ಮಾಡಿರುವುದೇನು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.