ADVERTISEMENT

ಮತಗಟ್ಟೆ ಸಮೀಕ್ಷೆಗಳು ನಿಜ ಆಗುವುದಿಲ್ಲ: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 20 ಮೇ 2019, 11:18 IST
Last Updated 20 ಮೇ 2019, 11:18 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ಜನರ ಆದೇಶ ಯಾವ ರೀತಿ ಬರುತ್ತದೆಯೊ ಗೊತ್ತಿಲ್ಲ. ಯಾವಾಗಲು ಸಮೀಕ್ಷೆಗಳು ನಿಜ ಆಗುವುದಿಲ್ಲ. ಮೂರು ದಿವಸ ಕಾಯಿರಿ ನೋಡೋಣ...

ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಮತಗಟ್ಟೆ ಸಮೀಕ್ಷೆಗಳ ಬಗ್ಗೆ ಶಾಸಕ ಶಾಮನೂರು ಶಿವಶಂಕರಪ್ಪ ಮಾಧ್ಯಮದವರಿಗೆ ಉತ್ತರಿಸಿದ್ದು ಹೀಗೆ..

ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೋಮವಾರ ಪಾಲ್ಗೊಳ್ಳಲು ಬಂದಿದ್ದ ವೇಳೆ ಮಾತನಾಡಿದ ಅವರು ‘ಮತಗಟ್ಟೆ ಸಮೀಕ್ಷೆಗಳು ಯಾವಾಗಲು ನಿಜವಾಗಿಲ್ಲ. ಎರಡು ಸಾರಿ ತಪ್ಪಾಗಿವೆ. ಬರಲಿ ನೋಡೋಣ’ ಎಂದು ಹೇಳಿದರು.

ADVERTISEMENT

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ ಎಂಬ ಪ್ರಶ್ನೆಗೆ ‘ಅದು ಏನೋ ಗೊತ್ತಿಲ್ಲ. ಆ ಬಗ್ಗೆ ನನ್ನನ್ನು ಏನು ಕೇಳಬೇಡಿ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.