ADVERTISEMENT

ದಾವಣಗೆರೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 5:51 IST
Last Updated 26 ಮಾರ್ಚ್ 2024, 5:51 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾವಣಗೆರೆ: ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಮಾನಾಯ್ಕ (38) ಮೃತರು.

‘ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ಹಾಕಿದ್ದು, ಮಳೆ ಇಲ್ಲದ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿದ್ದರು. ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ₹ 1.70 ಲಕ್ಷ, ಧರ್ಮಸ್ಥಳ ಸಂಘದಲ್ಲಿ ₹ 3 ಲಕ್ಷ, ಗ್ರಾಮೀಣ ಕೂಟದಲ್ಲಿ ₹ 40,000 ಸೇರಿದಂತೆ ವಿವಿಧೆಡೆ ಸುಮಾರು ₹ 12 ಲಕ್ಷ ಸಾಲ ಮಾಡಿದ್ದರು. ಮಳೆ, ಬೆಳೆ ಇಲ್ಲದೇ ಸಾಲ ಹೇಗೆ ತೀರಿಸುವುದು ಎಂಬ ಬಗ್ಗೆ ತೀವ್ರವಾಗಿ ನೊಂದಿದ್ದರು’ ಎಂದು ಮೃತರ ಕುಟುಂಬದವರು ತಿಳಿಸಿದ್ದಾರೆ.

ADVERTISEMENT

‘ಸೋಮವಾರ ಬೆಳಿಗ್ಗೆ ಸಾಲಗಾರರು ಮನೆ ಬಳಿ ಬಂದು ಗಲಾಟೆ ಮಾಡಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ದೂರಲಾಗಿದೆ.

ಶಾಸಕ ಭೇಟಿ, ಸಾಂತ್ವನ:

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತ ರೈತನ ಮೃತದೇಹವನ್ನು ರವಾನಿಸಲಾಗಿತ್ತು. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಶವಾಗಾರಕ್ಕೆ ಭೇಟಿ ನೀಡಿ, ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.