ADVERTISEMENT

ದಾವಣಗೆರೆ: ಮೊಬೈಲ್ ಟವರ್‌ಗೆ ಬೆಂಕಿ– ತಪ್ಪಿದ ಅನಾಹುತ 

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 4:10 IST
Last Updated 25 ಸೆಪ್ಟೆಂಬರ್ 2021, 4:10 IST
   

ದಾವಣಗೆರೆ: ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್‌ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ದಳ ಸಕಾಲದಲ್ಲಿ ಬೆಂಕಿ ನಂದಿಸುವ ಮೂಲಕ ಅಪಾಯವನ್ನು ತಪ್ಪಿಸಿದೆ.

ಅಗ್ನಿಶಾಮಕದಳದವರು ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿಸಿದರು.

ADVERTISEMENT

ಬ್ಯಾಟರಿ, ಜನರೇಟರ್, ಕೇಬಲ್‌ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಗ್ನಿಶಾಮಕ ದಳದ ಆಧಿಕಾರಿ ಬಸವಪ್ರಭು ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.