ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಿಂದ ಪ್ರತಿವರ್ಷ ನೀಡಲಾಗುವ ಮಾಧ್ಯಮ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.
ವಿಜಯ ಕರ್ನಾಟಕದ ಯಳನಾಡು ಮಂಜುನಾಥ, ಸಂಯುಕ್ತ ಕರ್ನಾಟಕದ ಡಿ.ರಂಗನಾಥ ರಾವ್, ನ್ಯೂಸ್-18 ವಾಹಿನಿಯ ಎಚ್.ಎಂ.ಪಿ. ಕುಮಾರ್, ಬಿ-ಟಿವಿ ಕ್ಯಾಮೆರಾಮನ್ ಲೋಕೇಶ್, ದಾವಣಗೆರೆ ಟೈಮ್ಸ್ ಪತ್ರಿಕೆಯ ವೀರೇಶ್ ಆಯ್ಕೆಯಾಗಿದ್ದಾರೆ.
ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.