ADVERTISEMENT

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 3:31 IST
Last Updated 5 ಸೆಪ್ಟೆಂಬರ್ 2021, 3:31 IST
ಹೊನ್ನಾಳಿ– ನ್ಯಾಮತಿ ಅವಳಿ ತಾಲ್ಲೂಕಿನ ಗ್ರಾಮಗಳಲ್ಲಿ ನಡೆದ ಲಸಿಕಾ ಕಾರ್ಯಕ್ರಮವನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ಪರಿಶೀಲಿಸಿದರು.
ಹೊನ್ನಾಳಿ– ನ್ಯಾಮತಿ ಅವಳಿ ತಾಲ್ಲೂಕಿನ ಗ್ರಾಮಗಳಲ್ಲಿ ನಡೆದ ಲಸಿಕಾ ಕಾರ್ಯಕ್ರಮವನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ಪರಿಶೀಲಿಸಿದರು.   

ಹೊನ್ನಾಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬುದು ಸುಳ್ಳು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕೋವಿಡ್ ಸಂದರ್ಭದಲ್ಲಿ ಅವರು ತೆಗದುಕೊಂಡ ತೀರ್ಮಾನಗಳ ಬಗ್ಗೆ ರಾಷ್ಟ್ರೀಯ ನಾಯಕರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರು ಮುಖ್ಯಮಂತ್ರಿ ಇರುತ್ತಾರೊ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು. ಅದೇ ಅರ್ಥದಲ್ಲಿ ಅಮಿತ್ ಶಾ ಅವರೂ ಮಾತನಾಡಿದ್ದಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ADVERTISEMENT

ಮಾಜಿ ಸಚಿವ ಎಂ.ಬಿ. ಪಾಟೀಲ ಅವರು ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋಗಿ, ಅದರಲ್ಲಿ ವಿಫಲರಾಗಿದ್ದರು. ಈಗ ಮತ್ತೊಮ್ಮೆ ಅದಕ್ಕೆ ಕೈ ಹಾಕಿದ್ದು ಜನರು ತಕ್ಕ ಉತ್ತರ ನೀಡುತ್ತಾರೆ ಎಂದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಲಸಿಕೆ ನೀಡುವ ವಿಚಾರದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.ಇದುವರೆಗೂ ಅವಳಿ ತಾಲೂಕಿನಾದ್ಯಂತ 1,38,528 ಜನರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲಿನ ಶೇಕಡ 98ರಷ್ಟು ಜನರಿಗೆ ಲಸಿಕೆ ಹಾಕಲಾಗಿದೆ. 18 ವರ್ಷ ಮೇಲಿನ ಶೇ 48 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.