ADVERTISEMENT

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನೃತ್ಯ; ಹೃದಯಾಘಾತದಿಂದ ಎಂಜಿನಿಯರ್ ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 7:54 IST
Last Updated 28 ಸೆಪ್ಟೆಂಬರ್ 2023, 7:54 IST
<div class="paragraphs"><p>ನಾಗರಾಜ್ ಪತ್ತಾರ್‌</p></div>

ನಾಗರಾಜ್ ಪತ್ತಾರ್‌

   

ಜಗಳೂರು: ಪಟ್ಟಣದ ಬುಧವಾರ ರಾತ್ರಿ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ್ ಪತ್ತಾರ್ (30) ಮೃತರು.

ADVERTISEMENT

ಪಟ್ಟಣದ ಗಂಗಾಂಭಿಕ ಬಡಾವಣೆಯಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ, ಗೆಳೆಯರೊಂದಿಗೆ ಡಿಜೆ ಸಂಗೀತಕ್ಕೆ ಮಹಾತ್ಮ ಗಾಂಧಿ ವೃತ್ತದ ಬಳಿ ನೃತ್ಯ ಮಾಡುವಾಗ ಅಸ್ವಸ್ಥರಾಗಿದ್ದಾರೆ. ಕೂಡಲೇ ಪಟ್ಟಣದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಲಾಗಿದೆ. ಕೂಡಲೇ ಅಲ್ಲಿಯೇ ಕುಸಿದು ಬಿದ್ದು ನಾಗರಾಜ್ ಸಾವನ್ನಪ್ಪಿದರು.

ಇವರು ಇಲ್ಲಿನ ತಾಲ್ಲೂಕು ರೃಷ್ಮೆ ಇಲಾಖೆ ಅಧಿಕಾರಿಯಾಗಿದ್ದ ನಾರಾಯಣ್ ಪತ್ತಾರ್‌ ಅವರ ಪುತ್ರರಾದ ನಾಗರಾಜ್ ಪತ್ತರ್ ವಿಂಡ್ ಮಿಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ನಾರಾಯಣ ಪತ್ತರ್ ಮೂಲತಃ ಬಾಗಲಕೋಟೆ ಜಿಲ್ಲೆಯವರಾಗಿದ್ದು , ಕಳೆದ 25 ವರ್ಷಗಳಿಂದ ಜಗಳೂರಿನಲ್ಲಿ ನಲೆಸಿದ್ದರು. ಎರಡು ವರ್ಷಗಳ ಹಿಂದೆ ಕೊರೊನಾ ಅವಧಿಯಲ್ಲಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.