ಸಂತೇಬೆನ್ನೂರು: ಗ್ರಾಮದ ವಿವಿಧೆಡೆ ಶನಿವಾರ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗೆ ಮುನ್ನ ಸಾಂಪ್ರದಾಯಿಕ ವಾದ್ಯ ಮೇಳಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಮಾಡಿ ಕರೆತರಲಾಯಿತು.
ಡೊಳ್ಳು, ಮಂಗಳವಾದ್ಯ, ಹಲಗೆಗಳು ವಾದನ ಗಮನ ಸೆಳೆಯಿತು. ಅಲಂಕೃತ ಟ್ರ್ಯಾಕ್ಟರ್ಗಳಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆ ನಡೆಯಿತು.
ವಿಭಿನ್ನ ಶೈಲಿಯ ಗಣೇಶ ಮೂರ್ತಿಗಳನ್ನು ತಮ್ಮ ಅಭಿರುಚಿಗೆ ತಕ್ಕಂತೆ ಆಯ್ಕೆ ಮಾಡಿ, ಪ್ರತಿಷ್ಠಾಸಿದರು. ಮೋದಕ, ಕರ್ಜಿಕಾಯಿ, ಹೋಳಿಗೆ, ಉಂಡೆಗಳ ಪ್ರಸಾದ ವಿನಿಯೋಗ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.