ADVERTISEMENT

ಹರಿಹರ| ಗ್ಯಾಸ್ ಗೀಸರ್ ಸ್ಫೋಟ: ಪತ್ರಕರ್ತ ರಾಘವೇಂದ್ರ ಸಾವು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 4:55 IST
Last Updated 2 ಮಾರ್ಚ್ 2023, 4:55 IST
ಪತ್ರಕರ್ತ ರಾಘವೇಂದ್ರ
ಪತ್ರಕರ್ತ ರಾಘವೇಂದ್ರ   

ಹರಿಹರ: ಸ್ನಾನ ಮಾಡಲೆಂದು ಗ್ಯಾಸ್ ಗೀಸರ್ ಆನ್ ಮಾಡಿದಾಗ ಸ್ಫೋಟಗೊಂಡು ಗಾಯಗೊಂಡಿದ್ದ ಪತ್ರಕರ್ತ ರಾಘವೇಂದ್ರ(42) ಗುರುವಾರ ಮೃತಪಟ್ಟಿದ್ದಾರೆ.

ಶನಿವಾರ ಈ ದುರ್ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಒಯ್ಯಲಾಗಿತ್ತು. ಅಲ್ಲಿ ಗುರುವಾರ ಮುಂಜಾನೆ ಮೃತಪಟ್ಟಿದ್ದರು.

ಹರಿಹರ ವಿದ್ಯಾನಗರ ನಿವಾಸಿಯಾದ ಅವರು ಆರಂಭದಲ್ಲಿ ಪತ್ರಿಕಾ ಏಜೆಂಟ್ ಆಗಿದ್ದರು. ಬಳಿಕ ಪತ್ರಕರ್ತರಾಗಿದ್ದರು. ಒಂದು ದಶಕಕ್ಕೂ ಅಧಿಕ ಸಮಯ 'ಪ್ರಜಾವಾಣಿ' ಅರೆಕಾಲಿಕ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಪಾಲುದಾರಿಕೆಯಲ್ಲಿ ಹೋಟೆಲ್ ಆರಂಭಿಸಿದ್ದರು.

ADVERTISEMENT

ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರಿ, ಒಬ್ಬ ಸಹೋದರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.