ADVERTISEMENT

ದಾವಣಗೆರೆ: ಉತ್ತಮ ಮಳೆ; ₹ 63.50 ಲಕ್ಷ ನಷ್ಟ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 3:08 IST
Last Updated 18 ನವೆಂಬರ್ 2021, 3:08 IST
ದಾವಣಗೆರೆಯ ನಿಟುವಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸೈಕಲ್‌ ಸವಾರನೊಬ್ಬ ಸುರಿಯುತ್ತಿದ್ದ ಮಳೆಯಲ್ಲಿ ಸಾಗಿದರ–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ನಿಟುವಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸೈಕಲ್‌ ಸವಾರನೊಬ್ಬ ಸುರಿಯುತ್ತಿದ್ದ ಮಳೆಯಲ್ಲಿ ಸಾಗಿದರ–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ನವೆಂಬರ್‌, ಡಿಸೆಂಬರ್‌ನಲ್ಲಿ ಮಳೆ ಬಂದರೆ ಏಪ್ರಿಲ್‌, ಮೇ ತಿಂಗಳಲ್ಲಿ ನೀರಿನ ಕೊರತೆ ಉಂಟಾಗಲ್ಲ ಎಂಬ ಜನರ ಅನುಭವದ ಮಾತಿಗೆ ಸರಿಯಾಗಿ ಕೆಲವು ದಿನಗಳಿಂದ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ, ಬುಧವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ₹ 63.50 ಲಕ್ಷ ನಷ್ಟ ಉಂಟಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 20 ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಹರಿಹರ ತಾಲ್ಲೂಕಿಲ್ಲಿ 1 ಕಚ್ಚಾ ಮನೆಗೆ ಭಾಗಶಃ ಹಾನಿಯಾಗಿದೆ. 695 ಎಕರೆ ಭತ್ತದ ಬೆಳೆ ನಷ್ಟವಾಗಿದೆ.

ಹೊನ್ನಾಳಿ ತಾಲ್ಲೂಕಿನಲ್ಲಿ 3 ಪಕ್ಕಾ ಮನೆ, ನ್ಯಾಮತಿ ತಾಲ್ಲೂಕಿನಲ್ಲಿ 1 ಪಕ್ಕಾ ಮನೆ, ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ, 4 ಕಚ್ಚಾ ಮನೆಗಳಿಗೆ ಹಾನಿಯಾಗಿದೆ.

ADVERTISEMENT

ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನಲ್ಲಿ 19.48 ಮಿ.ಮೀ., ದಾವಣಗೆರೆ 05.61 ಮಿ.ಮೀ., ಹರಿಹರ 19.30 ಮಿ.ಮೀ., ಹೊನ್ನಾಳಿ 27.80 ಮಿ.ಮೀ, ಜಗಳೂರು ತಾಲ್ಲೂಕಿನಲ್ಲಿ 20.80 ಮಿ.ಮೀ. ಮಳೆಯಾಗಿದೆ.

ಮನೆಗೆ ನುಗ್ಗಿದ ನೀರು: ಹರಿಹರ ತಾಲ್ಲೂಕು ಹೊಳೆಸಿರಿಗೆರೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಕಾಲುವೆಗಳು ತುಂಬಿದ್ದರಿಂದ ಈ ಅವಾಂತರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಮನೆ ಒಳಗೊಂಡಂತೆ ಹಲವು ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.