ಹರಪನಹಳ್ಳಿ:ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಯೋಧ ಬಂಡೇರ ವಸಂತ್ (39) ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿ, ನಾಲ್ವರು ಸಹೋದರರು ಇದ್ದಾರೆ. ವಸಂತ್ ಅವರು ಕಿಡ್ನಿ ವೈಫಲ್ಯದಿಂದ ಬಳ
ಲುತ್ತಿದ್ದರು. ಚಿಕಿತ್ಸೆಗಾಗಿ ರಜೆ ಪಡೆದು ಸ್ವಗ್ರಾಮಕ್ಕೆ ಮರಳಿದ್ದರು. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪೊಲೀಸ್ಇಲಾಖೆಯಿಂದ ಗೌರವ ವಂದನೆ ಸಲ್ಲಿಸುವ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿ, ಸಿಪಿಐ ನಾಗರಾಜ್ ಎಸ್. ಕಮ್ಮಾರ ಅವರ ಮಾರ್ಗದರ್ಶನ ಮೇರೆಗೆ ಅರಸೀಕೆರೆ ಠಾಣೆ ಪಿಎಸ್ಐ ನಾಗರತ್ನಮ್ಮ ನೇತೃತ್ವದಲ್ಲಿ ಪೊಲೀಸರ ತಂಡಗೌರವ ವಂದನೆ ಸಲ್ಲಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.