ದಾವಣಗೆರೆ: ತಮ್ಮ ಅಭ್ಯರ್ಥಿಗಳ ಪರ ಮತದಾರರನ್ನು ಓಲೈಸುವ ಪ್ರಕ್ರಿಯೆ ವಿಪರೀತಕ್ಕೆ ಹೋಗಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯಿತು.
ಇಲ್ಲಿನ ಹೈಸ್ಕೂಲ್ ಮೈದಾನ ಈ ಚಕಮಕಿಗೆ ಸಾಕ್ಷಿಯಾಯಿತು. ಏಳು ಬೂತುಗಳು ಇಲ್ಲಿದ್ದಿದ್ದರಿಂದ ಮತದಾರರ ಸಂಖ್ಯೆ ಅಧಿಕವಾಗಿತ್ತು. ಕಾರ್ಯಕರ್ತರ ಸಂಖ್ಯೆ ಇನ್ನೂ ಅಧಿಜವಾಗಿತ್ತು.
ಪೊಲೀಸರು ಮಧ್ಯಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.