ADVERTISEMENT

ಕಳೆಯ ಕಾಟಕ್ಕೆ ಎಡೆಕುಂಟೆಯೇ ಪರಿಹಾರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 6:43 IST
Last Updated 17 ಜುಲೈ 2025, 6:43 IST
ಹರಿಹರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಹರಿಹರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

ಹರಿಹರ: ‘ತಾಲ್ಲೂಕಿನ ಮೆಕ್ಕೆಜೋಳದ ಬೆಳೆಯಲ್ಲಿ ಬೆಳೆದಿರುವ ಮುಳ್ಳುಸಜ್ಜೆ ಕಳೆಯನ್ನು ಎಡೆಕುಂಟೆ ಹೊಡೆದು ನಿಯಂತ್ರಿಸಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ನಟರಾಜ್ ರೈತರಿಗೆ ಸಲಹೆ ನೀಡಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯನ್ನು ಬೆಳೆದಿದ್ದು 30ರಿಂದ 45 ದಿನದ ಬೆಳವಣಿಗೆ ಹಂತದಲ್ಲಿದೆ. ಹೊಸಳ್ಳಿ ಹಾಗೂ ಬಿಳಸನೂರು ಹಾಗೂ ಸುತ್ತಲಿನ ಪ್ರದೇಶದಲ್ಲಿ ಮುಳ್ಳುಸಜ್ಜೆ ಕಳೆ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷ ಮೆಕ್ಕೆಜೋಳ ಬೆಳೆಯುವುದರಿಂದ ಈ ಸಮಸ್ಯೆ ಎದುರಾಗಿದೆ, ಸೂರ್ಯಕಾಂತಿ, ಸಜ್ಜೆ, ರಾಗಿ ಬೆಳೆಯುವ ಮೂಲಕ ಬೆಳೆ ಪರಿವರ್ತನೆ ಮಾಡಿದರೆ ಕಳೆಯ ಕಾಟ ನಿವಾರಣೆಯಾಗಲಿದೆ ಎಂದು ಅವರು ಸಲಹೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.