ADVERTISEMENT

ಹರಿಹರ: ಕಾಳಿದಾಸ ನಗರ 14ನೇ ವಾರ್ಡ್‌ ಉಪಚುನಾವಣೆ: ಜೆಡಿಎಸ್‍ ಜಯಭೇರಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 2:45 IST
Last Updated 7 ಸೆಪ್ಟೆಂಬರ್ 2021, 2:45 IST
ಹರಿಹರದ ಕಾಳಿದಾಸ ನಗರ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‍ ಅಭ್ಯರ್ಥಿ ಜಯಗಳಿಸಿದ್ದರಿಂದ ಮಾಜಿ ಶಾಸಕ ಎಚ್‍.ಎಸ್‍. ಶಿವಶಂಕರ್‍ ಹಾಗೂ ಜೆಡಿಎಸ್‍ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
ಹರಿಹರದ ಕಾಳಿದಾಸ ನಗರ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‍ ಅಭ್ಯರ್ಥಿ ಜಯಗಳಿಸಿದ್ದರಿಂದ ಮಾಜಿ ಶಾಸಕ ಎಚ್‍.ಎಸ್‍. ಶಿವಶಂಕರ್‍ ಹಾಗೂ ಜೆಡಿಎಸ್‍ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.   

ಹರಿಹರ: ಇಲ್ಲಿನ ಕಾಳಿದಾಸ ನಗರ 14ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ. ಅಲ್ತಾಫ್‍ 742 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‍ನ ಜೀನತ್‍ ಉನ್ನೀಸಾ ಅವರ ವಿರುದ್ಧ 333 ಮತಗಳ ಅಂತರದಿಂದ ಜಯ ಸಾಧಿಸಿದರು.

ನಗರದ ಮಿನಿವಿಧಾನಸೌಧ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ 8ರಿಂದ ಮತಏಣಿಕೆ ಕಾರ್ಯ ಆರಂಭಗೊಂಡಿತು. 8.30ಕ್ಕೆ ಫಲಿತಾಂಶ ಪ್ರಕಟಗೊಂಡಿತು. ಮತಏಣಿಕೆ ಕಾರ್ಯದಲ್ಲಿ ಚುನಾವಣಾಧಿಕಾರಿ ರಾಮಾಂಜನೇಯ, ಉಪ ಚುನಾವಣಾಧಿಕಾರಿ ಲಕ್ಷ್ಮಣನಾಯಕ್‌, ತಹಶೀಲ್ದಾರ್‍ ಕೆ.ಬಿ. ರಾಮಚಂದ್ರಪ್ಪ, ಪಿಎಸ್‍ಐ ಸುನಿಲ್‍ ತೇಲಿ, ಸಿಬ್ಬಂದಿ ಬಿ.ಬಿ. ರೇವಣನಾಯಕ್‌, ಬಸವರಾಜಯ್ಯ ಭಾಗವಹಿಸಿದ್ದರು.

ಉಪಚುನಾವಣೆಗೆ ಶುಕ್ರವಾರ ನಡೆದ ಮತದಾನದಲ್ಲಿ 1,444 ಮತದಾರರು ಹಕ್ಕು ಚಲಾಯಿಸಿದ್ದರು. ಜೆಡಿಎಸ್‍ ಅಭ್ಯರ್ಥಿ ಬಿ. ಅಲ್ತಾಫ್‍ 742, ಕಾಂಗ್ರೆಸ್‍ ಅಭ್ಯರ್ಥಿ ಜೀನತ್‍ ಉನ್ನೀಸಾ 409, ಬಿಜೆಪಿ ಅಭ್ಯರ್ಥಿ ಸಂತೋಷ ರಾಜನಹಳ್ಳಿ 290 ಹಾಗೂ ಪಕ್ಷೇತರ ಅಭ್ಯರ್ಥಿ ಸಂಕೇತರಾಜ್‍ 3 ಮತಗಳನ್ನು ಪಡೆದರು.

ADVERTISEMENT

ಪಟಾಕಿ ಸಿಡಿಸಿ ಸಂಭ್ರಮ: ಜೆಡಿಎಸ್ ಅಭ್ಯರ್ಥಿಯ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಜಯಘೋಷಗಳೊಂದಿಗೆ ಸಂಭ್ರಮಾಚರಣೆ ಮಾಡಿದರು. ಮಾಜಿ ಶಾಸಕ ಎಚ್‍.ಎಸ್‍. ಶಿವಶಂಕರ್‍ ಹಾಗೂ ವಿಜೇತ ಅಭ್ಯರ್ಥಿ ಬಿ. ಅಲ್ತಾಫ್‍ಗೆ ಹಾರ ಹಾಕಿ ಮೆರವಣಿಗೆ ನಡೆಸಲಾಯಿತು.

ಕೋವಿಡ್‍ ನಿಯಮ ಮಾಯ: ಜೆಡಿಎಸ್‍ ಸಂಭ್ರಮಾಚರಣೆಯಲ್ಲಿ ಅಂತರ ಹಾಗೂ ಮಾಸ್ಕ್‌ ಕಣ್ಮರೆಯಾಗಿತ್ತು. ನೂರಾರು ಜನ ಗುಂಪು ಸೇರಿ ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.