ಜಗಳೂರು: ತಾಲ್ಲೂಕಿನ ಚಿಕ್ಕಅರಕೆರೆ ಗ್ರಾಮದಲ್ಲಿ ಜಮೀನಿನಲ್ಲಿ ಶೇಂಗಾ ಕಟಾವು ಮಾಡುತ್ತಿದ್ದ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಸೋಮವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗ್ರಾಮದ ರಾಜಪ್ಪ (42) ಮೃತರು. ಹೊಲದಲ್ಲಿ ಶೇಂಗಾ ಕಟಾವು ಮಾಡುತ್ತಿದ್ದಾಗ ಭಾರಿ ಗುಡುಗು ಸಿಡಿಲಿನ ಹೊಡೆತಕ್ಕೆ ರಾಜಪ್ಪ ಸಾವನ್ನಪ್ಪಿದ್ದಾರೆ.
ಮೃತ ರಾಜಪ್ಪ ಅವರಿಗೆ ಇಬ್ಬರು ಮಕ್ಕಳು ಹಾಗು ಪತ್ನಿ ಇದ್ದಾರೆ. 3 ತಿಂಗಳ ಹಿಂದೆ ರಾಜಪ್ಪನ ತಂದೆ ಮತ್ತು ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದೀಗ ರಾಜಪ್ಪ ಸಾವಿನಿಂದ ಕುಟುಂಬ ಕಂಗಾಲಾಗಿದೆ.
ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.