ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.ಇದರಿಂದಾಗಿ ₹ 8.5 ಲಕ್ಷ ಅಂದಾಜು ನಷ್ಟವಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಪೂರ್ಣ ಹಾನಿಯಾಗಿದೆ. ₹ 67 ಸಾವಿರ ಲಕ್ಷ ನಷ್ಟವಾಗಿದೆ. 2 ಎಕರೆ ಮೆಕ್ಕೆಜೋಳ ಹಾಗೂ 3 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದೆ. ₹ 70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾಮನೆ, ಒಂದು ಕಚ್ಚಾಮನೆ ಭಾಗಶಃ ಹಾನಿಯಾಗಿದೆ. ತಲಾ ₹ 50 ಸಾವಿರ ನಷ್ಟವಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ₹ 1.5 ಲಕ್ಷ ಅಂದಾಜು ನಷ್ಟವಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 9 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ₹ 3.70 ಲಕ್ಷ ನಷ್ಟ ಎಂದು ಅಂದಾಜಿಸಲಾಗಿದೆ.
ಬುಧವಾರ 16.98 ಮಿ.ಮೀ ಸರಾಸರಿ ಮಳೆಯಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 12.36 ಮಿ.ಮೀಟರ್ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 12.68 ಮಿ.ಮೀ., ಹರಿಹರ ತಾಲ್ಲೂಕಿನಲ್ಲಿ 6 ಮಿ.ಮೀ., ಹೊನ್ನಾಳಿ ತಾಲ್ಲೂಕಿನಲ್ಲಿ 9.4 ಮಿ.ಮೀ., ಜಗಳೂರು ತಾಲ್ಲೂಕಿನಲ್ಲಿ 44.5 ಮಿ.ಮೀ. ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.