ADVERTISEMENT

ನಾನು ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 16:16 IST
Last Updated 10 ಡಿಸೆಂಬರ್ 2021, 16:16 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140 ಸ್ಥಾನ ಪಡೆಯಲಿದ್ದು, ನಾನೇ ಮುಖ್ಯಮಂತ್ರಿಯಾಗುತ್ತೇನೆ’ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿ, ‘ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ಜನರು ಬಿಜೆಪಿ ಮೇಲೆ ಬೇಜಾರಾಗಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ. ಅದರಲ್ಲಿ ತಪ್ಪೇನಿದೆ? ಮುಂದಿನ ಚುನಾವಣೆ ಬರಲಿ ನಾನು ಕೇಳುತ್ತೇನೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರೂ ಆಕಾಂಕ್ಷಿಯೇ. ಆದರೆ ಇದನ್ನು ನಿರ್ಧರಿಸುವವರು ಮತದಾರರು. ಯಾರು ಕೈಎತ್ತುತ್ತಾರೋ ಅವರನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಕೇಳುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.