ADVERTISEMENT

ಕೋಳಿವಾಡ ಮನೆ ಮೇಲೆ ಐಟಿ ದಾಳಿಯಲ್ಲಿ ನನ್ನ ಪಾತ್ರವಿಲ್ಲ: ಬಸವರಾಜ ಬೊಮ್ಮಾಯಿ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 12:58 IST
Last Updated 4 ಡಿಸೆಂಬರ್ 2019, 12:58 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ದಾವಣಗೆರೆ:‘ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆಯ ಮೇಲಿನ ಐಟಿ ದಾಳಿಯಲ್ಲಿ ನನ್ನ ಪಾತ್ರವಿಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳಜೊತೆ ಮಾತನಾಡಿದ ಅವರು, ಐಟಿ ದಾಳಿ ಕುರಿತು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

‘ಲಿಂಗಾಯತರು ಬಿಜೆಪಿಗೆ ಮತ ಹಾಕದೇ ಇದ್ರೆ ಯಡಿಯೂರಪ್ಪನವರ ಕೆನ್ನೆಗೆ ಹೊಡೆದ ಹಾಗೆ’ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಳ್ಳಾರಿ ಜಿಲ್ಲಾಧಿಕಾರಿ ಸ್ವಯಂಕೃತವಾಗಿ ಪ್ರಕರಣ ದಾಖಲಿಸಿದ್ದಾರೆ. ಮಾಧುಸ್ವಾಮಿ ಬಳಿ ನಾನು ಮಾತನಾಡಿ ಸತ್ಯಾಸತ್ಯತೆ ತಿಳಿದುಕೊಳ್ಳುತ್ತೇನೆ’ ಎಂದು ಹೇಳಿದರು.

ADVERTISEMENT

ಹನಿಟ್ರ್ಯಾಪ್ ಕುರಿತು ಕೇಳಿದ ಪ್ರಶ್ನೆಗೆ ‘ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ತನಿಖೆ ನಡೆಸಲಿದ್ದಾರೆ’ ಎಂದು ಹೇಳಿದರು.

‘ಸರ್ಕಾರ ಬೀಳುವುದಕ್ಕಿಂತ ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸುವುದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಕ್ತ ಎನಿಸಿರಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.