ADVERTISEMENT

ಚನ್ನಗಿರಿ: ಹಾಲಸ್ವಾಮಿ ವಿರಕ್ತ ಮಠದ ಜಯದೇವ ಸ್ವಾಮೀಜಿ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 19:35 IST
Last Updated 19 ಆಗಸ್ಟ್ 2020, 19:35 IST
ಜಯದೇವ ಸ್ವಾಮೀಜಿ
ಜಯದೇವ ಸ್ವಾಮೀಜಿ   

ಚನ್ನಗಿರಿ: ಹಾಲಸ್ವಾಮಿ ವಿರಕ್ತ ಮಠದ ಜಯದೇವ ಸ್ವಾಮೀಜಿ (78) ಅನಾರೋಗ್ಯದಿಂದ ಶಿವಮೊಗ್ಗದ ನಂಜಪ್ಪ ಖಾಸಗಿ ಆಸ್ಪತ್ರೆಯಲ್ಲಿ
ಬುಧವಾರ ಮಧ್ಯಾಹ್ನ 2.30ಕ್ಕೆ ಮೃತಪಟ್ಟರು.

ಜಯದೇವ ಸ್ವಾಮೀಜಿ 50 ವರ್ಷಗಳಿಂದ ವಿರಕ್ತ ಮಠದ ಸ್ವಾಮೀಜಿಯಾಗಿ ಸೇವೆ ಸಲ್ಲಿಸಿದ್ದರು. ಸ್ವಾಮೀಜಿಯ ಅಗಲಿಕೆಯಿಂದಮಠದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿತ್ತು.

ಗುರುವಾರ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಬಳಿ ಇರುವ ಚಿಕ್ಕುಲಿಕೆರೆ ಗ್ರಾಮದ ಶಿವಲಿಂಗೇಶ್ವರ ಸ್ವಾಮಿ ಗದ್ದುಗೆ ಮಠದ ಆವರಣದಲ್ಲಿ ಅಂತಿಮ ಸಂಸ್ಕಾರವನ್ನು ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.