ADVERTISEMENT

ಸರ್ಕಾರದ ಉಳಿವಿಗೆ ಜೆಡಿಎಸ್‌ನಿಂದ ಉರುಳುಸೇವೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 20:04 IST
Last Updated 9 ಜುಲೈ 2019, 20:04 IST
ರಾಜ್ಯದ ಮೈತ್ರಿ ಸರ್ಕಾರದ ಉಳಿವಿಗಾಗಿ ಜೆಡಿಎಸ್‌ ಕಾರ್ಯಕರ್ತರು ದಾವಣಗೆರೆಯ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ಉರುಳುಸೇವೆ ಮಾಡಿದರು
ರಾಜ್ಯದ ಮೈತ್ರಿ ಸರ್ಕಾರದ ಉಳಿವಿಗಾಗಿ ಜೆಡಿಎಸ್‌ ಕಾರ್ಯಕರ್ತರು ದಾವಣಗೆರೆಯ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ಉರುಳುಸೇವೆ ಮಾಡಿದರು   

ದಾವಣಗೆರೆ: ರಾಜ್ಯದ ಮೈತ್ರಿ ಸರ್ಕಾರದ ಉಳಿವಿಗಾಗಿ ಜೆಡಿಎಸ್‌ ಕಾರ್ಯಕರ್ತರು ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ಉರುಳುಸೇವೆ ಮಾಡಿದರು.

ಯುವ ಘಟಕದ ಅಧ್ಯಕ್ಷ ಎ. ಶ್ರೀನಿವಾಸ್ ನೇತೃತ್ವದಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸರ್ಕಾರ ಸುಭದ್ರವಾಗಿರಲಿ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

‘ಸಮ್ಮಿಶ್ರ ಸರ್ಕಾರಕ್ಕೆ ಬಂದ ಸಂಕಷ್ಟ ದೂರವಾಗಲಿ, ವಿರೋಧಿಗಳ ಕುತಂತ್ರ ಫಲಿಸದಿರಲಿ’ ಎಂದು ಕಾರ್ಯಕರ್ತರು ದೇವರಲ್ಲಿ ಬೇಡಿಕೊಂಡರು.

ADVERTISEMENT

ಜೆಡಿಎಸ್ ವಕ್ತಾರರಾದ ಖಾದರ್‌ಬಾಷಾ, ಮುಖಂಡ ಅಮಾನುಲ್ಲಾ ಖಾನ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಧನಂಜಯ್, ಹನುಮಂತ ರೆಡ್ಡಿ, ಆಕಾಶ್, ಬಸವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.