ADVERTISEMENT

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಕಲಾ ತಂಡಗಳ ಮೆರುಗು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 5:56 IST
Last Updated 1 ಮಾರ್ಚ್ 2021, 5:56 IST
ದಾವಣಗೆರೆ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮೆರವಣಿಗೆ
ದಾವಣಗೆರೆ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮೆರವಣಿಗೆ   

ದಾವಣಗೆರೆ: ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯುತ್ತಿರುವ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿದ್ಯಾನಗರ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ಡೊಳ್ಳು ಕುಣಿತ, ವೀರಗಾಸೆ, ಕೀಲುಕುದುರೆ, ಮಕ್ಕಳ ಬ್ಯಾಂಡ್‌ಸೆಟ್‌ಗಳು ಮೆರವಣಿಗೆಗೆ ಮೆರುಗು ನೀಡಿತು.

ಸಮ್ಮೇಳನದ ಸರ್ವಾಧ್ಯಕ್ಷ ಎನ್‌.ಟಿ. ಯರ‍್ರಿಸ್ವಾಮಿ ಸಾರೋಟು ಏರಲು ನಿರಾಕರಿಸಿದ್ದು, ಕನ್ನಡ ಭುವನೇಶ್ವರಿ ದೇವಿಯ ವಿಗ್ರಹದೊಂದಿಗೆ ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು.

ADVERTISEMENT

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅವರೂ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.