ADVERTISEMENT

ಅಪಘಾತದ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ: ಬಸ್‌ ಜಪ್ತಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 5:15 IST
Last Updated 1 ಅಕ್ಟೋಬರ್ 2021, 5:15 IST
ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೋರ್ಟ್‌ ಸಿಬ್ಬಂದಿ ಕೆಎಸ್‌ಆರ್‌ಟಿಸಿ ಹಾವೇರಿ ವಿಭಾಗಕ್ಕೆ ಸೇರಿದ ಬಸ್‌ಅನ್ನು (ಜಪ್ತಿ) ವಶಪಡಿಸಿಕೊಂಡಿರುವುದು–ಪ್ರಜಾವಾಣಿ ಚಿತ್ರ
ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೋರ್ಟ್‌ ಸಿಬ್ಬಂದಿ ಕೆಎಸ್‌ಆರ್‌ಟಿಸಿ ಹಾವೇರಿ ವಿಭಾಗಕ್ಕೆ ಸೇರಿದ ಬಸ್‌ಅನ್ನು (ಜಪ್ತಿ) ವಶಪಡಿಸಿಕೊಂಡಿರುವುದು–ಪ್ರಜಾವಾಣಿ ಚಿತ್ರ   

ದಾವಣಗೆರೆ: ಅಪಘಾತದ ಪರಿಹಾರವನ್ನು ನೀಡುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ನ್ಯಾಯಾಲಯದ ಆದೇಶದಂತೆ ಹಾವೇರಿ ವಿಭಾಗದ ಕೆಎಸ್‌ಆರ್‌ಟಿಸಿ ಬಸ್‌ ಅನ್ನು ಗುರುವಾರ ಜಪ್ತಿ ಮಾಡಲಾಗಿದೆ.

2014ರಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಹಾವೇರಿ ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ ಕಾರಿಗೆ ಡಿಕ್ಕಿಯಾಗಿ ದಾವಣಗೆರೆಯ ಗೌರಿ ಎಸ್‌. ಪಾಟೀಲ್‌ ಮೃತಪಟ್ಟಿದ್ದರು. ಅವರಿಗೆ ಪರಿಹಾರವಾಗಿ ₹ 2.88 ಕೋಟಿ ಪರಿಹಾರ ನೀಡುವಂತೆ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಲಯ ಆದೇಶ ಮಾಡಿತ್ತು. ಆದರೆ ಕೆಸ್‌ಆರ್‌ಟಿಸಿ ಹಾವೇರಿ ವಿಭಾಗವು ಈ ಪರಿಹಾರವನ್ನು ನೀಡಿರಲಿಲ್ಲ.

ಬಸ್‌ ಜಪ್ತಿ ಮಾಡುವಂತೆ ನ್ಯಾಯಾಲಯವು ಆದೇಶಿಸಿತ್ತು. ಅದರಂತೆ ಕೋರ್ಟ್‌ನ ಅಮೀನರಾದ ಶ್ರೀಧರ್‌, ಮಹೇಶ್‌, ರಾಜ್‌ಕುಮಾರ್‌, ಗುರು, ಪೊಲೀಸರು, ಪಂಚಾಯಿತಿದಾರರು ಬಂದು ಬಸ್‌ಗಳನ್ನು ಜಪ್ತಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.