ADVERTISEMENT

ಜೆಡಿಎಸ್‌ಗೆ ಕಾಡುತ್ತಿದೆ ಸಂಘಟನೆಯ ಕೊರತೆ

ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್‌ ಮುಖಂಡ ಅನೀಸ್‌ ‍ಪಾಷ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 3:03 IST
Last Updated 4 ಜನವರಿ 2021, 3:03 IST
ದಾವಣಗೆರೆ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಜೆಡಿಎಸ್‌ ನಾಯಕ ಅನೀಸ್‌ ಪಾಷ ಉದ್ಘಾಟಿಸಿದರು
ದಾವಣಗೆರೆ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಜೆಡಿಎಸ್‌ ನಾಯಕ ಅನೀಸ್‌ ಪಾಷ ಉದ್ಘಾಟಿಸಿದರು   

ದಾವಣಗೆರೆ: ಜಿಲ್ಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆದರೆ ಪಕ್ಷದ ಸಂಘಟನೆಯ ಕೊರತೆಯಿಂದಾಗಿ ನಿಷ್ಕ್ರಿಯರಾಗಿದ್ದಾರೆ ಎಂದು ಜೆಡಿಎಸ್‌ ಮುಖಂಡ ಅನೀಸ್‌ ‍ಪಾಷ ಹೇಳಿದರು.

ಜೆಡಿಎಸ್‌ ಜಿಲ್ಲಾ ಕಾರ್ಮಿಕರ ವಿಭಾಗದ ಕಾರ್ಯದರ್ಶಿ ಅಕ್ಬರ್ ಅಧ್ಯಕ್ಷತೆಯಲ್ಲಿ ರೋಟರಿ ಬಾಲಭವನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನುಮುಂದೆ ಜಿಲ್ಲೆಯಲ್ಲಿ ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳನ್ನು ಮೂಲ ಕಾರ್ಯಕರ್ತರನ್ನು ಸೇರಿಸಿಕೊಂಡು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಮಹಾ ಕಾರ್ಯದರ್ಶಿ ಎಚ್.ಸಿ. ಗುಡ್ಡಪ್ಪ, ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಅತ್ಯುತ್ತಮ ಆಡಳಿತ ನೀಡಿದ್ದರು. ಬೇರೆ ಪಕ್ಷಗಳು ಅಂಥ ಆಡಳಿತ ನೀಡಿಲ್ಲ’ ಎಂದು ಹೇಳಿದರು.

ಜೆಡಿಎಸ್ ನಾಯಕರಾದ ಜಸ್ಟಿನ್ ಜಯಕುಮಾರ್, ಸಂಗನಗೌಡ್ರು, ಪಾಪಣ್ಣ, ಶ್ರೀಧರ್ ಪಾಟೀಲ್ ಮಾತನಾಡಿದರು. ದಾದಾಪೀರ್ ಸ್ವಾಗತಿಸಿದರು. ಪ್ಯಾರು ವಂದಿಸಿದರು. ರಾಜಸಾಬ್, ಗೋಣಿವಾಡ ಮಂಜುನಾಥ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.