ADVERTISEMENT

ರಸ್ತೆ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 4:39 IST
Last Updated 13 ಅಕ್ಟೋಬರ್ 2020, 4:39 IST
ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಭೂಮಿಪೂಜೆ ನೆರವೇರಿಸಿದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿ.ಪಂ. ಉಪಾಧ್ಯಕ್ಷೆ ಸಾಕಮ್ಮ, ಮಂಜುಳ ಇದ್ದರು.
ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಭೂಮಿಪೂಜೆ ನೆರವೇರಿಸಿದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿ.ಪಂ. ಉಪಾಧ್ಯಕ್ಷೆ ಸಾಕಮ್ಮ, ಮಂಜುಳ ಇದ್ದರು.   

ಚನ್ನಗಿರಿ: ‘ಕೊರೊನಾ ಕಾರಣದಿಂದಾಗಿ ಜಿಲ್ಲೆಯ ತಾಲ್ಲೂಕುಗಳಿಗೆ ಪ್ರವಾಸ ಮಾಡಲು ಸಾಧ್ಯವಾಗಿಲ್ಲ. ಮೂರು ತಿಂಗಳಲ್ಲಿ ಅಧಿಕಾರಿಗಳ ತಂಡದೊಂದಿಗೆ ಜನಸಂಪರ್ಕ ಸಭೆ ನಡೆಸಿ, ಜನರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಭರವಸೆ ನೀಡಿದರು.

ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತಿಪ್ಪಗೊಂಡನಹಳ್ಳಿ ಗ್ರಾಮದಿಂದ ಗಾಂಧಿನಗರ-ಹನುಮಂತನಗರ ಮೂಲಕ ಜೋಳದಹಾಳ್ ಗ್ರಾಮದ
ವರೆಗೆ 3.8 ಕಿ.ಮೀ., ಚಿಕ್ಕೂಲಿಕೆರೆಯಿಂದ ಅಜ್ಜಿಹಳ್ಳಿ-ತಿಮ್ಲಾಪುರ-ಗಾಳಿಹಳ್ಳಿ ಗ್ರಾಮದವರೆಗೆ 4.3 ಕಿ.ಮೀ. ಹಾಗೂ ಆಗರಬನ್ನಿಹಟ್ಟಿ ಗ್ರಾಮದಿಂದ ಹೊಸ
ಬನ್ನಿಹಟ್ಟಿ- ಬುಳುಸಾಗರ-ಕಗತೂರು- ರಾಮಗೊಂಡನಹಳ್ಳಿ ಮೂಲಕ ಕೊಂಡದಹಳ್ಳಿವರೆಗೆ 12.26 ಕಿ.ಮೀ. ರಸ್ತೆಯನ್ನು ₹ 14.42 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.

ADVERTISEMENT

ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ‘ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ನಿಂಗಣ್ಣನ ಕೆರೆಯಿಂದ ತಾಲ್ಲೂಕಿನ ಮಾವಿನಹೊಳೆ ಗ್ರಾಮದ ಕೆರೆಗೆ ನೀರು ಹರಿಸಿ, ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜ
ನೆಗೆ ಹದಿನೈದು ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ್ ನಾಯ್ಕ, ಮಂಜುಳ ಟಿ.ವಿ. ರಾಜು, ತುಮ್ಕೋಸ್ ನಿರ್ದೇಶಕ ಟಿ.ವಿ. ರಾಜು ಪಟೇಲ್, ಮಲ್ಲಿಕಾರ್ಜುನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ, ಸದಸ್ಯೆ ಪುಷ್ಪಾ, ಎಪಿಎಂಸಿ ನಿರ್ದೇಶಕ ಟಿ. ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.