ADVERTISEMENT

ದಾವಣಗೆರೆ: ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 22:59 IST
Last Updated 21 ಫೆಬ್ರುವರಿ 2026, 22:59 IST
ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಸಮೀಪದ ನಿಲೋಗಲ್ ಗ್ರಾಮದ ಬಳಿ ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿರುವ ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ
ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಸಮೀಪದ ನಿಲೋಗಲ್ ಗ್ರಾಮದ ಬಳಿ ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿರುವ ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ   

ಬಸವಾಪಟ್ಟಣ (ದಾವಣಗೆರೆ): ಸಮೀಪದ ನಿಲೋಗಲ್‌ ಗ್ರಾಮದ ಬಳಿ ಅಡಿಕೆ ತೋಟದ ತಂತಿಬೇಲಿಗೆ ಅಳವಡಿಸಿದ್ದ ಉರುಳಿಗೆ ಸಿಲುಕಿ 1 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ. 

ರೈತ ಜಿ. ರಂಗನಗೌಡ ಅವರ ತೋಟದಲ್ಲಿ ಅವಘಡ ನಡೆದಿದೆ. ಶನಿವಾರ ಬೆಳಿಗ್ಗೆ ರೈತರು ತೋಟಕ್ಕೆ ತೆರಳಿದಾಗ  ಚಿರತೆ ಸಿಲುಕಿದ್ದು ಗೊತ್ತಾಗಿದೆ. ಚಿರತೆ ರಕ್ಷಿಸುವ ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ಫಲಕಾರಿಯಾಗಲಿಲ್ಲ. 

‘ಚಿರತೆ ಶುಕ್ರವಾರವೇ ಸಿಲುಕಿರಬಹುದು. ಉರುಳಿಗೆ ಮೂರು ಕಾಲು ಸಿಲುಕಿ ತೀವ್ರವಾಗಿ ಗಾಯಗೊಂಡಿತ್ತು’ ಎಂದು ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ರವೀಂದ್ರಕುಮಾರ್‌ ತಿಳಿಸಿದ್ದಾರೆ.

ADVERTISEMENT

ಚಿರತೆ ಸಾವಿನ ಕುರಿತು ತನಿಖೆ ನಡೆದಿದೆ. ದುಷ್ಕರ್ಮಿಗಳು ತಂತಿಬೇಲಿಗೆ ಉರುಳು ಅಳವಡಿಸಿ ಕಾಡುಹಂದಿ ಮತ್ತಿತರ ಪ್ರಾಣಿ ಬೇಟೆಯಾಡುತ್ತಾರೆ. ಅಂತದೇ  ಉರುಳಿಗೆ ಚಿರತೆ ಸಿಲುಕಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.