ADVERTISEMENT

ದಾವಣಗೆರೆ: ಪೌರ ಕಾರ್ಮಿಕರ ವಸತಿಗೃಹಗಳ ಕಾಮಗಾರಿ ಕಳಪೆಯಾಗದಿರಲಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 2:57 IST
Last Updated 11 ಜೂನ್ 2021, 2:57 IST
ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಒಂದನೇ ವಾರ್ಡ್‌ನಲ್ಲಿ ₹ 40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪೌರ ಕಾರ್ಮಿಕರ ವಸತಿಗೃಹಗಳ ಕಾಮಗಾರಿಯನ್ನು  ಮೇಯರ್‌ ಎಸ್‌.ಟಿ. ವೀರೇಶ್‌ ಮತ್ತು ತಂಡದವರು ವೀಕ್ಷಣೆ ಮಾಡಿದರು
ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಒಂದನೇ ವಾರ್ಡ್‌ನಲ್ಲಿ ₹ 40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪೌರ ಕಾರ್ಮಿಕರ ವಸತಿಗೃಹಗಳ ಕಾಮಗಾರಿಯನ್ನು  ಮೇಯರ್‌ ಎಸ್‌.ಟಿ. ವೀರೇಶ್‌ ಮತ್ತು ತಂಡದವರು ವೀಕ್ಷಣೆ ಮಾಡಿದರು   

ದಾವಣಗೆರೆ: ಪಾಲಿಕೆ ವತಿಯಿಂದ ಒಂದನೇ ವಾರ್ಡ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಪೌರ ಕಾರ್ಮಿಕರ ವಸತಿಗೃಹಗಳ ಕಾಮಗಾರಿ ಯಾವುದೇ ರೀತಿಯಲ್ಲಿ ಕಳಪೆ ಆಗಬಾರದು ಎಂದು ಮೇಯರ್‌ ಎಸ್‌.ಟಿ. ವೀರೇಶ್‌ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.

₹ 40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ಪಾಲಿಕೆಯ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾ ಪ್ರಕಾಶ್‌, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೋಣ್ಯಪ್ಪ, ಪಾಲಿಕೆ ಸದಸ್ಯರಾದ ಜಿ.ಡಿ. ಪ್ರಕಾಶ, ಸೂಪರಿಂಟೆಂಡೆಂಟ್ ಎಂಜಿನಿಯರ್ ಉದಯಕುಮಾರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸಂದೀಪ್, ಪ್ರೀತಂ, ಸಹಾಯಕ ಎಂಜಿನಿಯರ್ ಚೇತನ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.