ಜಗಳೂರು: ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಪಿಡಿಒ ಬಿ. ಬಸವರಾಜಪ್ಪ ಅವರು ಮನೆಯ ಇ-ಸ್ವತ್ತು ಖಾತೆ ಮಾಡಿಕೊಡಲು ಗ್ರಾಮಸ್ಥರೊಬ್ಬರಿಂದ ₹ 5,000 ಪಡೆಯುತ್ತಿದ್ದ ವೇಳೆ ದಾವಣಗೆರೆಯಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ದೇವಿಕೆರೆ ಪಂಚಾಯಿತಿ ವ್ಯಾಪ್ತಿಯ ಮೆದಿಕೆರೇನಹಳ್ಳಿ ಗ್ರಾಮದ ಶಾಂತಕುಮಾರ್ ಎಂಬುವವರ ತಾಯಿ ಶಾರದಮ್ಮ ಹೆಸರಿನಲ್ಲಿರುವ ಮನೆಯ ಇ-ಸ್ವತ್ತು ಖಾತೆಯನ್ನು ಮಾಡಿಕೊಡಲು ಪಿಡಿಒ ಬಿ. ಬಸವರಾಜಪ್ಪ ₹ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟು ಸತಾಯಿಸುತ್ತಿದ್ದರು. ದೂರುದಾರರ ದೂರಿನ ಆಧಾರದ ಮೇಲೆ ಬಲೆ ಬೀಸಿದ ಲೋಕಾಯುಕ್ತರು ದಾವಣಗೆರೆ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಕಟ್ಟಡವೊಂದರಲ್ಲಿ ಪಿಡಿಒ ಬಸವರಾಜಪ್ಪ ದೂರುದಾರರಿಂದ ₹ 5000 ಪಡೆಯುತ್ತಿದ್ದಾದ ದಾಳಿ ನಡೆಸಿ ಬಂಧಿಸಿದ್ದಾರೆ. ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಾಷ್ಟ್ರಪತಿ, ಆಂಜನೇಯ ಹಾಗೂ ಸಿಬ್ಬಂದಿ ಚಂದ್ರಶೇಖರ್, ವೀರೇಶಯ್ಯ, ಸುರೇಶ್, ಧನರಾಜ್, ಮೋಹನ್, ಬಸವರಾಜ ಹಾಗೂ ವಿನಾಯಕ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.