ADVERTISEMENT

ವಿದ್ಯಾರ್ಥಿ ಕಾಲಿನ ಮೇಲೆ ಹರಿದ ಲಾರಿ: ಮಾನವೀಯತೆ ಮೆರೆದ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 0:46 IST
Last Updated 9 ಫೆಬ್ರುವರಿ 2021, 0:46 IST

ಜಗಳೂರು: ತಾಲ್ಲೂಕಿನ ಮುಸ್ಟೂರು ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ಸೋಮವಾರ ಲಾರಿ ಹರಿದು ತೀವ್ರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಹಾಗೂ ಆ್ಯಂಬುಲೆನ್ಸ್ ಚಾಲಕರು ಆಸ್ಪತ್ರೆಗೆ ಕರೆದೋಯ್ದು ಮಾನವೀಯತೆ ಮೆರೆದಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಕಡಬನಕಟ್ಟೆ ಗ್ರಾಮದ ರಕ್ಷಿತ್ (16) ಗಾಯಗೊಂಡ ವಿದ್ಯಾರ್ಥಿ.ಜಗಳೂರಿನಿಂದ ಮುಸ್ಟೂರು ಗ್ರಾಮಕ್ಕೆ ಬಂದಿಳಿದ ವಿದ್ಯಾರ್ಥಿ ರಸ್ತೆ ದಾಟಿಕೊಂಡು ಕಡಬನಕಟ್ಟೆಗೆ ಬಸ್ ಹತ್ತಲು ಹೋಗುವ ಸಮಯದಲ್ಲಿ ಜಗಳೂರಿನ ಮಾರ್ಗವಾಗಿ ಬಂದ ಲಾರಿ ವಿದ್ಯಾರ್ಥಿಯ ಕಾಲಿನ ಮೇಲೆ ಹರಿದಿದೆ.

ಅಪಘಾತ ಸಂಭವಿಸಿದ ಕೂಡಲೇ ನೆರವಿಗೆ ಧಾವಿಸಿ ಬಂದ ಗ್ರಾಮಸ್ಥರು ಆಂಬ್ಯುಲೆನ್ಸ್ ಕರೆಸಿ ಚಿತ್ರದುರ್ಗಕ್ಕೆ ಚಿಕಿತ್ಸೆಗೆ ಕಳುಹಿಸಲು ನೆರವಾದರು. ರಕ್ಷಿತ್ನನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕರೆದೊಯ್ಯಲಾಗಿದೆ.

ADVERTISEMENT

ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.