ADVERTISEMENT

ಹೈಕಮಾಂಡ್ ತೀರ್ಮಾನಕ್ಕೆ ಮುಖ್ಯಮಂತ್ರಿ ಬದ್ಧ: ಶಾಸಕ ಮಾಡಾಳ್‌

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 4:58 IST
Last Updated 24 ಜುಲೈ 2021, 4:58 IST
ವಿರೂಪಾಕ್ಷಪ್ಪ
ವಿರೂಪಾಕ್ಷಪ್ಪ   

ಚನ್ನಗಿರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಅವರು ಬದ್ಧರಾಗಿರುತ್ತಾರೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಚೆಗೆ ನಾನು ಮತ್ತು ಹಲವು ಶಾಸಕರು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸಿ, ಮತ್ತೆ ಅಧಿಕಾರ ಹಿಡಿಯುವಂತೆ ಕಿವಿಮಾತು ಹೇಳಿದ್ದರು’ ಎಂದು ತಿಳಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಎಲ್ಲ ಶಾಸಕರಿಗೂ ಸೂಚಿಸಿದ್ದರು ಎಂದು ಹೇಳಿದರು. ಪುರಸಭೆ ಸದಸ್ಯರಾದ ಪಟ್ಲಿ ನಾಗರಾಜ್, ಪರಮೇಶ್ ಪಾರಿ, ಚ.ಮ. ಗುರುಸಿದ್ದಯ್ಯ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.