ADVERTISEMENT

ಮಕ್ಕಳನ್ನು ಆದರ್ಶ ಪ್ರಜೆಗಳಾಗಿಸಿ

ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದಶ್ರೀ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 2:45 IST
Last Updated 4 ಜನವರಿ 2021, 2:45 IST
ಹರಪನಹಳ್ಳಿ ತಾಲ್ಲೂಕಿನ ಕಡತಿ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿಯಿಂದ ವಚನಾನಂದ ಸ್ವಾಮೀಜಿ ಅವರನ್ನು ಗೌರವಿಸಲಾಯಿತು
ಹರಪನಹಳ್ಳಿ ತಾಲ್ಲೂಕಿನ ಕಡತಿ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿಯಿಂದ ವಚನಾನಂದ ಸ್ವಾಮೀಜಿ ಅವರನ್ನು ಗೌರವಿಸಲಾಯಿತು   

ಹರಪನಹಳ್ಳಿ: ಮಕ್ಕಳು ಆದರ್ಶ ಪ್ರಜೆಗಳಾಗಿ ಹೊರಹೊಮ್ಮಲು ಪಾಲಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಪರಿಸರ, ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸಬೇಕು ಎಂದು ಹರಿಹರ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಲಹೆ ನೀಡಿದರು.

ತಾಲ್ಲೂಕಿನ ಕಡತಿ ಗ್ರಾಮದ ದೇವಸ್ಥಾನದಲ್ಲಿ ಗ್ರಾಮದರ್ಶನ ಕಾರ್ಯಕ್ರಮದಲ್ಲಿ ಭಾನುವಾರ ಹರಜಾತ್ರೆಗೆ ಆಹ್ವಾನ ನೀಡಿ ಅವರು ಮಾತನಾಡಿದರು.

ಚಿಕ್ಕ ಮಕ್ಕಳೇ ಪೋಲಿಯೊ, ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಜ್ಞಾನದ ಕೊರತೆಯಿಂದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ನೀರು ಲಭ್ಯವಾಗುವಂತೆ ಈಗಿನಿಂದಲೇ ಕಾಳಜಿವಹಿಸಬೇಕು ಎಂದರು.

ADVERTISEMENT

ಜ.14 ರಿಂದ ಜ.15ರ ವರೆಗೆ ಎರಡು ದಿನ ನಡೆಯುವ ಹರಜಾತ್ರೆ ಹರಿಹರ ಪೀಠದ ಆವರಣದಲ್ಲಿ ನಡೆಯಲಿದೆ. ಸ್ವಾವಲಂಬಿ ಭಾರತ, ಕೃಷಿ, ಯುವಜನ, ಮಹಿಳೆಯರ ಕುರಿತಾಗಿ ನಡೆಯುವ ಸಮಾವೇಶದಲ್ಲಿ ಗಣ್ಯರು, ಜ್ಞಾನಿಗಳು ಪಾಲ್ಗೊಳ್ಳಲಿದ್ದಾರೆ. ಜಾತ್ರೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಆಹ್ವಾನ ನೀಡಿದರು.

ದುಗ್ಗಾವತಿ, ತಾವರಗುಂದಿ, ನಿಟ್ಟೂರು, ಹಲುವಾಗಲು, ಅರಸನಾಳು, ಐ.ಬೇವಿನಹಳ್ಳಿ, ಹಾರಕನಾಳು, ಗೌರಿಹಳ್ಳಿ, ನೀಲಗುಂದ ಗ್ರಾಮಗಳಿಗೆ ತೆರಳಿ ಹರಜಾತ್ರೆಗೆ ಭಕ್ತರನ್ನು ಆಹ್ವಾನಿಸಿದರು. ಕಡತಿ ಗ್ರಾಮದ ಅರಣ್ಯ ಸೇವಾ ಸಮಿತಿ ಕಾರ್ಯಕರ್ತರು ಸ್ವಾಮೀಜಿಗೆ ಸಸಿಗಳನ್ನು ನೀಡಿ ಸನ್ಮಾನಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಜಗದೀಶ, ಚೆನ್ನನಗೌಡ, ಮಹೇಶ್ ಪೂಜಾರ್, ಬೇಲೂರು ಸಿದ್ದೇಶ್, ಬಸವರಾಜ್, ಶಶಿಧರ್, ಭರತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.