ಮಲೇಬೆನ್ನೂರು: ಮಳೆಯಿಂದತುಂಗಭದ್ರಾ ನದಿಯಲ್ಲಿ ಉಂಟಾಗಿರುವ ಪ್ರವಾಹ ಬುಧವಾರವೂ ಮುಂದುವರಿದಿದ್ದು ಉಕ್ಕಡಗಾತ್ರಿ ಸಂಪರ್ಕಿಸುವ ಫತ್ಯಾಪುರ, ತುಮ್ಮಿನಕಟ್ಟೆ ಮಾರ್ಗದ ರಸ್ತೆ ಜಲಾವೃತವಾಗಿದೆ.
ಕರಿಬಸವೇಶ್ವರ ಗದ್ದುಗೆಯ ಸ್ನಾನಘಟ್ಟ, ಜವಳದ ಕಟ್ಟೆ ನೀರಿನಲ್ಲಿ ಮುಳುಗಿವೆ. ಜಮೀನುಗಳಲ್ಲಿ ಕೆಸರು ತುಂಬಿದ್ದು ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ. ನೀರು ಇಳಿಯಲು ಒಂದು ವಾರವಾದರೂ ಬೇಕು. ಇದರಿಂದ ಕೃಷಿ ಚಟುವಟಿಕೆಗೆ ಹಿನ್ನೆಯಾಗಿದೆ ಎಂದು ನದಿ ಪಾತ್ರದ ರೈತ ಸಣ್ಣ ಸಂಜೀವರೆಡ್ಡಿ ತಿಳಿಸಿದರು. ಜನರು ನದಿಪಾತ್ರಕ್ಕೆ ತೆರಳದಂತೆ ಗ್ರಾಮಾಡಳಿತ ಎಚ್ಚರಿಕೆ ನೀಡಿದೆ. ತಾಲ್ಲೂಕು ಆಡಳಿತ ವಿಕೋಪ ಎದುರಿಸಲು ಸನ್ನದ್ಧವಾಗಿದೆ.
ಗಡಿ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿದ್ದರು. ಕಡಾರನಾಯ್ಕನಹಳ್ಳಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.