ADVERTISEMENT

ಪಾಲಿಕೆಯ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಮೇಯರ್

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 4:06 IST
Last Updated 23 ಸೆಪ್ಟೆಂಬರ್ 2021, 4:06 IST
ಮೇಯರ್‌ ಎಸ್.ಟಿ. ವೀರೇಶ್ ಅವರುಕಂದಾಯ ಇಲಾಖೆ ವಿಭಾಗದ ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಮೇಯರ್‌ ಎಸ್.ಟಿ. ವೀರೇಶ್ ಅವರುಕಂದಾಯ ಇಲಾಖೆ ವಿಭಾಗದ ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.   

ದಾವಣಗೆರೆ: ಮೇಯರ್‌ ಎಸ್.ಟಿ. ವೀರೇಶ್ ಅವರು ಕಂದಾಯ ಇಲಾಖೆ ವಿಭಾಗದ ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಖಾತೆ ಬದಲಾವಣೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

‘ಖಾತಾ ಎಕ್ಸ್‌ಟ್ರಾಕ್ಟ್ ನೀಡುವಲ್ಲಿ ವಿಳಂಬವಾಗುತ್ತಿದೆ. ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಆದಷ್ಟು ಬೇಗ ಕೆಲಸ ಮಾಡಿಕೊಡಬೇಕು. ಕಂದಾಯ ವಿಭಾಗದಲ್ಲಿ ಬೇಗ ಕೆಲಸ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಯಾಕೆ ಇಷ್ಟೊಂದು ನಿರ್ಲಕ್ಷ್ಯ ಮಾಡ್ತೀರಿ. ಸಮಸ್ಯೆ ಇದ್ದರೆ ಹೇಳಿ. ಜನರಿಗೆ ತೊಂದರೆ ಆದರೆ ಸಹಿಸಲ್ಲ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ ಮುದಜ್ಜಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.