ADVERTISEMENT

ಆ.27ಕ್ಕೆ ಈಡಿಗರ ಸಂಘದಿಂದ ನೂತನ ಸಚಿವರು, ಶಾಸಕರಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 15:54 IST
Last Updated 24 ಆಗಸ್ಟ್ 2023, 15:54 IST
Madhu Bangarappa
Madhu Bangarappa   

ಸಾಗರ: ಇಲ್ಲಿನ ಪ್ರಾಂತ್ಯ ಆರ್ಯ ಈಡಿಗರ ಸಂಘದ ವತಿಯಿಂದ ಆ.27ರಂದು ಬೆಳಿಗ್ಗೆ 11ಕ್ಕೆ ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಭಾಭವನದಲ್ಲಿ ಈಡಿಗ ಸಮುದಾಯದ ನೂತನ ಸಚಿವರು ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.

ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ಟಿ.ನಾಯ್ಕ್ ಅವರನ್ನು ಅಭಿನಂದಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಈಡಿಗರ ಸಂಘದ ಉಪಾಧ್ಯಕ್ಷ ಟಿ.ವಿ.ಪಾಂಡುರಂಗ ತಿಳಿಸಿದ್ದಾರೆ.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಪ್ರಮುಖರಾದ ಟಿ.ಪರಮೇಶ್ವರಪ್ಪ, ಮರಸ ಮಂಜಪ್ಪ, ಕಲಸೆ ಚಂದ್ರಪ್ಪ, ಎಂ.ಸಿ.ಪರಶುರಾಮಪ್ಪ, ಶಿವಪ್ಪ ಕಲಸೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.