ADVERTISEMENT

ಅಪಘಾತ ಗಾಯಾಳುಗಳಿಗೆ ನೆರವಾದ ಶಾಸಕ ಮಾಡಾಳ್‌

ರಸ್ತೆಯಲ್ಲಿ ಬಿದ್ದಿದ್ದ ಬೈಕ್‌ ಸವಾರರು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 4:05 IST
Last Updated 29 ಮಾರ್ಚ್ 2021, 4:05 IST
ವಿರೂಪಾಕ್ಷಪ್ಪ
ವಿರೂಪಾಕ್ಷಪ್ಪ   

ಚನ್ನಗಿರಿ: ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಬಳಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಬೈಕ್‌ವೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಚಿಕಿತ್ಸೆ ಕೊಡಿಸಲು ಶಾಸಕ ಮಾಡಾಳ್‌ ನೆರವಾದರು.

ಬೈಕ್‌ ಸವಾರರು ಹರಪನಹಳ್ಳಿಯವರು. ಅಪಘಾತದಿಂದಾಗಿ ಬೈಕ್‌ ಸವಾರ ಮತ್ತು ಹಿಂಬದಿ ಸವಾರ ರಸ್ತೆ ಬದಿಯಲ್ಲಿ ನರಳುತ್ತಾ ಬಿದ್ದಿದ್ದರು. ಈ ಸಮಯದಲ್ಲಿ ಸಂತೇಬೆನ್ನೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕಾರನ್ನು ನಿಲ್ಲಿಸಿ, ಗಾಯಾಳುಗಳ ಬಳಿ ತೆರಳಿ ತಕ್ಷಣ ದೇವರಹಳ್ಳಿಯಿಂದ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದರು. ನಂತರ ಆಂಬುಲೆನ್ಸ್ ತರಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT