ದಾವಣಗೆರೆ: ಹುಬ್ಬಳ್ಳಿಯಲ್ಲಿ ನಡೆದ ಘಟನೆ ಬೇಸರದ ವಿಚಾರ. ತಪ್ಪಿತಸ್ಥರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕಠಿಣ ಕ್ರಮ ಕೈಗೊಂಡರೆ ಮಾತ್ರ ಮುಂದೆ ಇಂಥ ಘಟನೆ ಮರುಕಳಿಸುವುದನ್ನು ತಡೆಯಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.
ಯುಪಿಎ ಸರ್ಕಾರ ಇದ್ದಾಗ ಒಂದು ರಫೇಲ್ ಯುದ್ದ ವಿಮಾನ ಖರೀದಿಗೆ ₹ 800 ಕೋಟಿ ನಿಗದಿ ಮಾಡಿತ್ತು. ನರೇಂದ್ರ ಮೋದಿ ಸರ್ಕಾರ ಅದನ್ನು ₹ 1600 ಕೋಟಿ ಕೊಟ್ಟು ಖರೀದಿ ಮಾಡುವ ಮೂಲಕ ಭ್ರಷ್ಟಾಚಾರ ಎಸಗಿತ್ತು. ರಾಜ್ಯ ಗುತ್ತಿಗೆದಾರ ಸಂಘ ರಾಜ್ಯ ಸರ್ಕಾರದ ಹಲವು ಸಚಿವರ ಶೇ 40 ಕಮಿಷನ್ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕೆ.ಎಸ್. ಈಶ್ವರಪ್ಪ ಶೇ 40 ಕಮಿಷನ್ ಪಡೆದಿರುವುದು ಕೂಡ ಮೋದಿಗೆ ಯಾವ ಲೆಕ್ಕವೂ ಅಲ್ಲ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.