ನ್ಯಾಮತಿ: ಸೊಸೆ ಜೊತೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಅತ್ತೆಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ತಾಲ್ಲೂಕಿನ ಒಡೆಯರಹತ್ತೂರು ಗ್ರಾಮದ ರತ್ನಮ್ಮ (57) ಕೊಲೆಯಾದವರು. ಅದೇ ಗ್ರಾಮದ ದಂಡಿ ಆನಂದ ಎಂಬಾತ ಕೊಲೆ ಮಾಡಿದ್ದಾನೆ ಎಂದು ರತ್ನಮ್ಮ ಅವರ ಮಗ ಹರೀಶ ದೂರಿನಲ್ಲಿ ಅಪಾದಿಸಿದ್ದಾರೆ.
‘ಆನಂದ ಎಂಬಾತ ನನ್ನ ಪತ್ನಿಗೆ ಮೊಬೈಲ್ ಕರೆ ಮಾಡುವುದು, ಮೆಸೇಜ್ ಕಳುಹಿಸುವ ಮೂಲಕ ಕಿರಿಕಿರಿ ಮಾಡುತ್ತಿದ್ದ. ನವೆಂಬರ್ 8ರ ರಾತ್ರಿ ನಮ್ಮ ಮನೆಯ ಬಳಿ ಬಂದು ನನ್ನ ಪತ್ನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಆಗ ನನ್ನ ತಾಯಿ ಆನಂದನ ಜೊತೆ ಗಲಾಟೆ ಮಾಡಿದ್ದಾರೆ. ಆಗ ಆನಂದ ನನ್ನ ತಾಯಿಯನ್ನು ಕೊಠಡಿಗೆ ಎಳೆದು ಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇದನ್ನು ಬೇರೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ನನ್ನ ಪತ್ನಿಗೆ ಬೆದರಿಕೆ ಹಾಕಿದ್ದಾನೆ’ ಎಂದು ಹರೀಶ ದೂರಿನಲ್ಲಿ ತಿಳಿಸಿದ್ದಾರೆ.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.