ADVERTISEMENT

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯರ ಸಹೋದರನ ಮಗನ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 12:30 IST
Last Updated 3 ನವೆಂಬರ್ 2022, 12:30 IST
ಎಂ.ಆರ್. ಚಂದ್ರಶೇಖರ್
ಎಂ.ಆರ್. ಚಂದ್ರಶೇಖರ್   

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ (25) ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಗುರುವಾರ ಕೊಳೆತ ಸ್ಥಿತಿಯಲ್ಲಿ ಮೃತಪದೇಹ ಪತ್ತೆಯಾಗಿದೆ.

ಹೊನ್ನಾಳಿ ನ್ಯಾಮತಿ ಮಧ್ಯೆ ಸೊರಟೂರು ಬಳಿ ತುಂಗಾ ಮೇಲ್ದಂಡೆಯ ಕಾಲುವೆಯಲ್ಲಿ ಕಾರು ಪತ್ತೆಯಾಗಿತ್ತು. ಕಾರಿನ ಹಿಂಬದಿ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಲ್ಲಿ ಒಬ್ಬರೇ ಇದ್ದು, ಹಿಂಬದಿ ಸೀಟಿಗೆ ಹೇಗೆ ಬಂದರು ಎಂಬ ಪ್ರಶ್ನೆ ಮೂಡಿದೆ. ಅಪಘಾತವೇ? ಕೊಲೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಭಾನುವಾರ ಸಂಜೆ 7.30ಕ್ಕೆ ಮನೆಯಿಂದ ಕಾರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಟ ನಡೆಸಿದ ಬಳಿಕ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.