ದಾವಣಗೆರೆ: ಮುಖ್ಯಮಂತ್ರಿರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪ ಸಂಬಂಧ ಇಲ್ಲಿನಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ.
‘ಸುಳ್ಳುಗಾರ ಮೋಗ್ಲಿ’ ಎಂಬ ಫೇಸ್ಬುಕ್ ಪೇಜ್ನಲ್ಲಿ ರೇಣುಕಾಚಾರ್ಯ ಅವರ ಅಶ್ಲೀಲ ಭಾವಚಿತ್ರ ಅಪಲೋಡ್ ಮಾಡಲಾಗಿದೆ. ಭಾವಚಿತ್ರ ಅಪ್ಲೋಡ್ ಮಾಡಿದ ವ್ಯಕ್ತಿ ಹಾಗೂ ಈ ಪೋಸ್ಟ್ ಅನ್ನು ಶೇರ್ ಮಾಡಿದ ಸಂತೋಷ್ ಟಿ.ಎಂ ಸಾಸ್ವೆಹಳ್ಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಮೇಶ್ ಎಂಬುವವರು ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.