ADVERTISEMENT

ಅಣ್ಣನಿಂದ ತಂಗಿಯ ಕೊಲೆ ಯತ್ನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 2:55 IST
Last Updated 20 ಅಕ್ಟೋಬರ್ 2020, 2:55 IST
ಕೈಕೋಳ
ಕೈಕೋಳ   

ಉಚ್ಚಂಗಿದುರ್ಗ: ಸಮೀಪದ ಕರಡಿದುರ್ಗ ಗ್ರಾಮದಲ್ಲಿ ಸೋಮವಾರ ತಂಗಿಗೆ ಅಣ್ಣನೇ ಮಚ್ಚಿನಿಂದ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಡಿದುರ್ಗ ಹನುಮಂತ ಆರೋಪಿ. ಆತನ ತಂಗಿ ರತ್ನಮ್ಮ (28) ಗಂಭೀರ ಗಾಯಗೊಂಡವರು. ರತ್ನಮ್ಮ ಅವರಿಗೆ 9 ವರ್ಷಗಳ ಹಿಂದೆ ಮದುವೆಯಾಗಿತ್ತು. ಐದು ವರ್ಷಗಳ ಹಿಂದೆ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದರು. ರತ್ನಮ್ಮ ಈಚೆಗೆ ವ್ಯಕ್ತಿಯೊಬ್ಬರ ಜತೆಗೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಅಣ್ಣ, ತಂಗಿ ಜಗಳವಾಡಿದ್ದರು. ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಲಾಗಿತ್ತು.

ಆದರೆ ಆಕೆ ಆ ಸಂಬಂಧವನ್ನು ಬಿಟ್ಟಿಲ್ಲ ಎಂದು ಸಿಟ್ಟುಕೊಂಡಿದ್ದ ಹನುಮಂತ ಸೋಮವಾರ ಮಚ್ಚಿನಿಂದ ಹಲ್ಲೆ ನಡೆಸಿದ್ದ. ಮಚ್ಚನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಅರಸೀಕೆರೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT

ಮಾನವೀಯತೆ ಮೆರೆದ ಪೊಲೀಸರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ರತ್ನಮ್ಮ ಅವರಿಗೆ ಸ್ಥಳೀಯರು ಯಾರೂ ಸಹಾಯ ಮಾಡಲಿಲ್ಲ. ಅರಸೀಕೆರೆ ಸಬ್ ಇನ್ಸ್ಪೆಕ್ಟರ್ ಎ. ಕಿರಣ್ ಕುಮಾರ್ ಹಾಗೂ ಸಿಬ್ಬಂದಿ ಕೂಡಲೇ ಖಾಸಗಿ ವಾಹನದ ಮೂಲಕ ಉಚ್ಚಂಗಿದುರ್ಗ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಉಚ್ಚಂಗಿದುರ್ಗದಿಂದ ದಾವಣಗೆರೆಗೆ ಒಯ್ಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.