ADVERTISEMENT

ಪರಿಸರ ಸಮತೋಲನ ಕಾಪಾಡಲು ಬೀಜದುಂಡೆ ಬಿತ್ತನೆ: ನಳಿನ್‌ ಕುಮಾರ್‌

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 3:48 IST
Last Updated 25 ಜುಲೈ 2021, 3:48 IST
ಚನ್ನಗಿರಿ ತಾಲ್ಲೂಕು ಬೆಂಕಿಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಿಜೆಪಿಯಿಂದ ಬೀಜದುಂಡೆ ಬಿತ್ತನೆ ಕಾರ್ಯವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶನಿವಾರ ನೆರವೇರಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಇದ್ದರು.
ಚನ್ನಗಿರಿ ತಾಲ್ಲೂಕು ಬೆಂಕಿಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಿಜೆಪಿಯಿಂದ ಬೀಜದುಂಡೆ ಬಿತ್ತನೆ ಕಾರ್ಯವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶನಿವಾರ ನೆರವೇರಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಇದ್ದರು.   

ಚನ್ನಗಿರಿ: ಇತ್ತೀಚಿನ ದಿನಗಳಲ್ಲಿ ಮಾನವನ ದುರಾಸೆಯಿಂದಾಗಿ ಕಾಡು ನಾಶವಾಗುತ್ತಿದೆ. ಕಾಡು ನಾಶವಾಗುತ್ತಿರುವುದರಿಂದ ಮರಗಿಡಗಳು ಕಡಿಮೆಯಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಕೃತಿ ವಿಕೋಪಕ್ಕೆ ಕಾರಣವಾಗಿದೆ. ಪರಿಸರ ಸಮತೋಲನ ಕಾಪಾಡಲು ಅರಣ್ಯ ಪ್ರದೇಶಗಳಲ್ಲಿ ಬಿಜೆಪಿಯಿಂದ ಬೀಜದುಂಡೆ ಬಿತ್ತನೆ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.

ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಶನಿವಾರ ತಾಲ್ಲೂಕು ಬಿಜೆಪಿಯಿಂದ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ಧರಾಮಯ್ಯ ಅವರು ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರ ಅವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬುದಕ್ಕೆ ಅಂಕಿಅಂಶಗಳು ಹೇಳುತ್ತವೆ. ಈ ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ್ದು ಕಾಂಗ್ರೆಸ್. ಅಂತಹ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿತ್ತು. ಬಾಬೂ ಜಗಜೀವನರಾಂ ಅವರನ್ನು ಪ್ರಧಾನಮಂತ್ರಿ ಮಾಡಲು ಮುಂದಾಗಲಿಲ್ಲ ಎಂದು ವ್ಯಂಗ್ಯವಾಡಿದರು.

ADVERTISEMENT

ಸಂಸದ ಜಿ.ಎಂ. ಸಿದ್ದೇಶ್ವರ, ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗನವಾಡಿ. ತಾಲ್ಲೂಕು ಬಿಜೆಪಿಅಧ್ಯಕ್ಷ ಶ್ರೀನಿವಾಸ್, ಮಲ್ಲಿಕಾರ್ಜುನ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.