ಯರಬಳ್ಳಿ ತಾಂಡಾ (ಉಚ್ಚಂಗಿದುರ್ಗ): ತೌಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಬಳ್ಳಿ ತಾಂಡಾದಲ್ಲಿ ಮಂಗಳವಾರ ನವ ವಿವಾಹಿತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾಂತೇಶ್ ನಾಯ್ಕ (24) ಆತ್ಮಹತ್ಯೆ ಮಾಡಿಕೊಂಡವರು.
‘ಒಂದು ವರ್ಷದಿಂದ ಮಹಾಂತೇಶ್ ನಾಯ್ಕ ಮೂರ್ಛೆರೋಗ (ಅಪಸ್ಮಾರ)ದಿಂದ ಬಳಲುತ್ತಿದ್ದರು. ಹಲವು ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಮಂಗಳವಾರ ಕುಟುಂಬದ ಸದಸ್ಯರೊಂದಿಗೆ ಹೊಲದಲ್ಲಿ ಕೆಲಸ ಮುಗಿಸಿ, ಬಳಿಕ ವಿಷ ಸೇವಿಸಿದ್ದಾರೆ. ದಾವಣಗೆರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.
ಅವರಿಗೆ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಅಂತ್ಯಕ್ರಿಯೆಯನ್ನು ಬುಧವಾರ ಅವರ ಜಮೀನಿನಲ್ಲಿ ನೆರವೇರಿಸಲಾಯಿತು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.