ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಸೇವಾ ಯೋಜನೆ ಘಟಕದಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾದಾಯಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘಾಲಯದ ಬಡ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ಕಾಲೇಜಿನ ಅಧ್ಯಾಪಕರು ನೀಡುತ್ತಿರುವುದು, ಹಸಿದವರ ಹೊಟ್ಟೆಗೆ ಮೊದಲು ಅನ್ನ ನೀಡಿ ನಂತರ ಧರ್ಮ ಬೋಧನೆ ಮಾಡಿ ಎಂಬ ವಿವೇಕಾನಂದರ ಮಾತಿಗೆ ಪೂರಕವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಪ್ರಾಂಶುಪಾಲ ಪ್ರೊ.ಎಚ್.ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾದಾಯಿನಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಿ.ಜಿ.ರಾಜೇಶ್ವರಿ, ಐಕ್ಯೂಎಸ್ಸಿ ಸಂಯೋಜಕ ಜಿ.ಎಸ್.ಸುರೇಶ, ಪಿ.ಎಸ್.ಐ ಶ್ರೀಪತಿ ಗಿನ್ನಿ, ರಮೇಶ್ ಎಂ.ಎನ್., ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಎಸ್., ದಾವಣಗೆರೆ ವಿವಿಯ ಅಧ್ಯಾಪಕ ಉಚ್ಚೇಗೌಡ, ಕನ್ನಡ ವಿಭಾಗದ ಮುಖ್ಯಸ್ಥೆ ಎಸ್.ಗೌರಮ್ಮ ಮಾತನಾಡಿದರು. ಮೇಘಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಥಮ ಬಿ.ಎ. ವಿದ್ಯಾರ್ಥಿನಿ ಅರ್ಪಿತಾ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಕುಮಾರ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅನುರಾಧಾ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಬಿ.ಕೆ.ಮಂಜುನಾಥ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.