ADVERTISEMENT

ವಿಷಾಹಾರ ಸೇವನೆ 49 ಜನ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 21:15 IST
Last Updated 10 ಆಗಸ್ಟ್ 2021, 21:15 IST

ಹರಿಹರ: ತಾಲ್ಲೂಕಿನ ಭಾನುವಳ್ಳಿ ಗ್ರಾಮದಲ್ಲಿ ತೊಟ್ಟಿಲು ಕಾರ್ಯಕ್ರಮದಲ್ಲಿ ಊಟ ಮಾಡಿದ ಮಕ್ಕಳು‌, ವಯಸ್ಕರು ಸೇರಿ‌ 49 ಜನರು ಅಸ್ವಸ್ಥರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಗ್ರಾಮದಲ್ಲಿ ಸೋಮವಾರ ರಾತ್ರಿ ತೊಟ್ಟಿಲು ಕಾರ್ಯಕ್ರಮದಲ್ಲಿ ಊಟಕ್ಕೆ ಶ‍್ಯಾವಿಗೆ ಪಾಯಸ ಮಾಡಲಾಗಿತ್ತು. ಸಿಹಿಯೂಟ ಮಾಡಿದ 49 ಜನರಲ್ಲಿ ವಾಂತಿ ಹಾಗೂ ವಾಂತಿಯ ಲಕ್ಷಣಗಳು ಗೋಚರಿಸಲಾರಂಭಿಸಿದವು. ಕೂಡಲೇ ಎಲ್ಲರನ್ನೂ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ನಂತರ, ಬಹುತೇಕ ಎಲ್ಲರೂ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 5 ವರ್ಷದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.