ಹೊನ್ನಾಳಿ: ಪುರಸಭಾ ಅಧ್ಯಕ್ಷರಾಗಿ ಬಾಬು ಹೋಬಳದಾರ್ ಅವರು ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷರಾಗಿದ್ದ ಕೆ.ವಿ. ಶ್ರೀಧರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಬಯಸಿ ಬಾಬು ಹೋಬಳದಾರ್ ಅವರೊಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರು. ತಹಶೀಲ್ದಾರ್ ಬಸವನಗೌಡ ಕೋಟೂರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಪಂಪಾಪತಿನಾಯ್ಕ, ಪ್ರಭಾರ ಅಧ್ಯಕ್ಷೆ ರಂಜಿತಾ ಚನ್ನಪ್ಪ, ಮಾಜಿ ಅಧ್ಯಕ್ಷ ಕೆ.ವಿ. ಶ್ರೀಧರ್, ಸದಸ್ಯರಾದ ಸುಮಾ ಮಂಜುನಾಥ್ ಇಂಚರ, ಅನುಶಂಕರ್ ಚಂದ್ರು, ಸುಮಾ ಸತೀಶ್, ಪದ್ಮಾ ಪ್ರಶಾಂತ್, ಸವಿತಾ ಮಹೇಶ್ ಹುಡೇದ್, ಉಷಾ ಗಿರೀಶ್, ಬಾವಿಮನೆ ರಾಜಣ್ಣ, ಧರ್ಮಪ್ಪ, ಹೊಸಕೇರಿ ಸುರೇಶ್, ರಾಜೇಂದ್ರ, ತನ್ವೀರ್, ಮೈಲಪ್ಪ, ಎಂ. ಸುರೇಶ್ ಉಪಸ್ಥಿತರಿದ್ದರು.
ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಬಾಬು ಹೋಬಳದಾರ್ ಅವರನ್ನು ಅಭಿನಂದಿಸಿದರು. ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಕಾರ್ಯದರ್ಶಿ ಶಿವಾನಂದ್, ಜಿಲ್ಲಾ ಕಾರ್ಯದರ್ಶಿ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಎ.ಬಿ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುರೇಂದ್ರನಾಯ್ಕ, ಎಂ.ಆರ್. ಮಹೇಶ್, ಎಂಪಿಎಂಸಿ ನಿರ್ದೇಶಕ ಕೆ.ಪಿ. ಕುಬೇರಪ್ಪ, ನವೀನ್, ಮಂಜುನಾಥ್ ಇಂಚರ ಅವರೂ ನೂತನ ಅಧ್ಯಕ್ಷರನ್ನು ಆಭಿನಂದಿಸಿದರು.
ಭವ್ಯ ಮೆರವಣಿಗೆ: ಬಾಬು ಹೋಬಳದಾರ್ ಅವರನ್ನು ತೆರೆದ ವಾಹನದಲ್ಲಿ ನಗರದಲ್ಲಿ ಭವ್ಯವಾದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.