ಕೇಂದ್ರ ಬಜೆಟ್ನಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಹೊಸ ಯೋಜನೆ ಬಗ್ಗೆ ಪ್ರಸ್ತಾಪಿಸಿಲ್ಲ. ಇದು ನಿರಾಶಾದಾಯಕ ಬಜೆಟ್. 2022ರೊಳಗೆ ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ, 2024ರೊಳಗೆ ಕುಡಿಯುವ ನೀರಿನ ಪೂರೈಕೆ ಬಗ್ಗೆ ಹೇಳಿದ್ದಾರೆ. ಈಗಿರುವ ನೀರು, ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಂಡು ಇದು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ. ರೈತರಿಗಾಗಿ ಶೂನ್ಯ ಬಂಡವಾಳದ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದು ಹೇಗೆ ಎಂಬುದರ ಬಗ್ಗೆ ವಿವರಣೆ ನೀಡಿಲ್ಲ. ಸ್ವಸಹಾಯ ಗುಂಪುಗಳನ್ನು ಎಲ್ಲ ಕಡೆ ವಿಸ್ತರಿಸುವುದಾಗಿ ಹೇಳಿರುವುದರಲ್ಲಿ ಹೊಸತನವಿಲ್ಲ. ಮಹಿಳೆಯರಿಗೆ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಿಯಲು ಉತ್ತೇಜನ ನೀಡುವುದಾಗಿ ಹೇಳಿದ್ದಾರೆ. ಆದರೆ ಯಾವ ರೀತಿ ಎಂಬುದನ್ನು ಪ್ರಸ್ತಾಪಿಸಿಲ್ಲ.
–ಡಾ. ಸುಚಿತ್ರಾ ಎಸ್. ಸಹ ಪ್ರಾಧ್ಯಾಪಕರು, ಅರ್ಥಶಾಸ್ತ್ರ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.