ದಾವಣಗೆರೆ: ಕೊರೊನಾ ಸಂಕಷ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನ ಬದಲಾಯಿಸುವುದು ಸರಿಯಲ್ಲ. ಪಕ್ಷದ ಭವಿಷ್ಯದ ದೃಷ್ಟಿಯಿದ ಯಡಿಯೂರಪ್ಪ ಇರಬೇಕು ಎಂದು ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ವಿ. ರಾಮಚಂದ್ರ ತಿಳಿಸಿದ್ದಾರೆ.
‘ಭಾನುವಾರ ಶಾಸಕರ ಸಭೆ ಮುಖ್ಯ ಸಚೇತಕರು ಮಾಹಿತಿ ನೀಡಿದ್ದರು. ನಾನು ಬೆಂಗಳೂರಿಗೆ ಹೋಗುವೆ. ಮುಖ್ಯಮಂತ್ರಿಗಳ ಜತೆಗೇ ಮಾತನಾಡುತ್ತೇನೆ. ಯಡಿಯೂರಪ್ಪ ಅವರು ಚನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ನಾನು ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗಿರುವೆ. ಎಲ್ಲ ಜನರ ಪ್ರೀತಿ ವಿಶ್ವಾಸ ಗಳಿಸಿ ಬಿಎಸ್ವೈ ಕೆಲಸ ಮಾಡುತ್ತಿದ್ದಾರೆ’ ಎಂದು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.